
ಸೋಮವಾರಪೇಟೆ, ಏ.08: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾಘಟಕದ ಅಧೀನಕ್ಕೊಳಪಡುವ, ಸೋಮವಾರಪೇಟೆ ತಾಲೂಕು ಘಟಕಕ್ಕೆ, ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಹಾಗೂ ಜಿಲ್ಲಾ ಸಮಿತಿಯ ನಿರ್ದೇಶನದಂತೆ, ಸೋಮವಾರಪೇಟೆ ತಾಲೂಕು ಘಟಕದ ಉಪಾಧ್ಯಕ್ಷರಾಗಿ, ಶ್ರೀಮತಿ ಸುಮತಿ ಬಿ. ಪಿ. ಪ್ರಧಾನ ಕಾರ್ಯದರ್ಶಿಯಾಗಿ ಒಡೆಪ್ಪನ ಕಾವ್ಯ ಪವನ್ , ಶರಣು ಗೌಡ ಹರಗ ಜಿಲ್ಲಾ ಸಮಿತಿ ಸದಸ್ಯರು, ಹಾಗೂ ಸದಸ್ಯರಾಗಿ ಪ್ರದೀಪ್ ಪೆಂಗ್ವಿನ್, ಬಸೀರಾ ರಶೀದ್, ಉಮೇಶ್ ಅಂಥೋನಿ, ಚಂದ್ರಕಲಾ ಬಿ ಬಿ, ಸಜಿತ್ ಕೆ ಪಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷರಾದ ಅಪ್ಪುಡ ಸುದೀಶ್ ಕುಶಾಲಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.