ಸೋಮವಾರಪೇಟೆ, ಮಾ.09: ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೋಮವಾರಪೇಟೆ ಮಹಿಳಾ ಸಮಾಜದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಬಿಜೆಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯತು.
ಮುಕ್ಯ ಅಥಿತಿಗಾಳಾಗಿ ಮಾಜೀ ಶಾಸಕ ಎಸ್.ಜಿ. ಮೇದಪ್ಪ, ಬಿಜೆಪಿ ಮಂಡಲ ಅದ್ಯಕ್ಷ ಗೌತಮ್, ಸೋಮವಾರಪೇಟೆ ಪ. ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಜಯಂತಿ ಶಿವಕುಮಾರ್ ಅವರುಗಳು ಭಾಗವಹಿಸಿದ್ದ, ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಶ್ರೀಮತಿ ಕವಿತಾ ವಿರೂಪಾಕ್ಷ ಮಾತನಾಡಿದರು. ವೇದಿಕೆಯಲ್ಲಿ ಮಡಿಕೇರಿ ನಗರದ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪುಷ್ಪ ನಾಗೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪೂರ್ಣಿಮ ಕಿರಣ್, ರಿಶಾ, ರಮ್ಯಾ ರವರ ಉಪಸ್ಥಿತರಿದ್ದರು.
ಪ್ರಾದಾನ ಮಂತ್ರಿ ಕಿರು ಆಹಾರ ಸಂಸ್ಕರಣ ಯೋಜನೆಯಿಂದ ಸಾಲ ಪಡೆದು ಸ್ವ-ಉದ್ಯೋಗ ಮಾಡುತ್ತಿರುವ ಶ್ರೀಮತಿ ರೂಪ ಅವರನ್ನು ಹಾಗೂ ಪಂ, ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಜಯಂತಿ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಜಲಜಶೇಖರ್ ರವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಮೊದಲಿಗೆ ಬಿ.ಪಿ. ಸುಮತಿ ಪ್ರಾರ್ಥಿಸಿದರೆ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ತಂಗಮ್ಮರವರು ವಂದಿಸಿದರು.