ಸೋಮವಾರಪೇಟೆ, ಡಿ.27: (ತೇಲಪಂಡ ಕವನ್ ಕಾರ್ಯಪ್ಪ) ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಹೊರಜಿಲ್ಲೆಯ ಕಳ್ಳರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಈಚೆಗೆ ಬಂಧಿಸಿದ್ದಾರೆ.
ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ ಬೀರನಹಳ್ಳಿ ಕಾವಲು ಗ್ರಾಮದ ಮರಿಯಪ್ಪ ಎಂಬವರ ಪುತ್ರ ಚಂದ್ರು ಹಾಗೂ ಮಂಜು ಎಂಬವರ ಪುತ್ರ ಸುರೇಶ್ ಬಂಧಿತ ಆರೋಪಿಗಳು.
ಪ್ರತಿನಿತ್ಯ ಸಣ್ಣ ಗಾತ್ರದ ಮರಗಳನ್ನು ಕಡಿದು ಮೂಟೆಗಳಲ್ಲಿ ಸಾಗಿಸಿ, ಬೆಮ್ಮತ್ತಿಯ ವ್ಯಕ್ತಿಯೋರ್ವನಿಗೆ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆಯ ನಂತರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
ಕಾರ್ಯಾಚರಣೆಯಲ್ಲಿ ಎಸಿಎಫ್ ಎ.ಎ.ಗೋಪಾಲ್ ಅವರ ಮಾರ್ಗದರ್ಶನದಲ್ಲಿ ಆರ್ಎಫ್ಒಗಳಾದ ಶೈಲೇಂದ್ರಕುಮಾರ್, ಪೂಜಶ್ರೀ, ಡಿಆರ್ಎಫ್ಗಳಾದ ಶ್ರವಣಕುಮಾರ್, ಸೂರ್ಯ, ಲೋಹಿತ್, ರೇಣುಕುಮಾರ್, ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ರಂಜಿತ್, ಸತೀಶ್, ದರ್ಶನ್, ರಾಕೇಶ್, ಪ್ರವೀಣ್, ಹರೀಶ್, ನಂದೀಶ್, ಸಂತೋಷ್ ಭಾಗವಹಿಸಿದ್ದರು.