
ಮಡಿಕೇರಿ, ಮಾ.16: ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆ ನೀಡಿದರೆ, ಪೋಷಕರು ಕಾನೂನು ಶಿಕ್ಷೆ ಎದುರಿಸಬೇಕಾಗಬಹುದು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರಪೇಟೆಯಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕನೋರ್ವನಿಗೆ ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ಸಹ ವಾಹನ ಚಾಲನೆ ಮಾಡಲು ತಮ್ಮ ವಾಹನವನ್ನು ನೀಡಿದ ಓರ್ವರಿಗೆ ಸೋಮವಾರಪೇಟೆಯ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರು ರೂ.20,000 ದಂಡ ವಿಧಿಸಿರುವ ಪ್ರಕರಣವನ್ನು ಉಲ್ಲೇಖಿಸಿರುವ ಅವರು, ಯಾವುದೇ ವಾಹನ ಮಾಲೀಕರು ಅಪ್ರಾಪ್ತರಿಗೆ ನಿಯಮದ ವಿರುದ್ದವಾಗಿ ವಾಹನ ಚಾಲನೆಗೆ ಅವಕಾಶ ನೀಡಿದರೆ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅದ್ದರಿಂದ ವಾಹನ ಮಾಲೀಕರು ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡದಂತೆ ಸೂಚನೆ ನೀಡಿದ್ದಾರೆ.