https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…

ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…

News, Informatin , Enteetinement and Advertisement
18/04/202518/04/2025nadubadenews@gmail.comLeave a Comment on ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…
Spread the love
ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…

ಬೆಂಗಳೂರು ಏ.18: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಬಸ್ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.

       ಇನ್ನೆರಡು ತಿಂಗಳಲ್ಲಿ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ಈಗಾಗಲೇ ಹಣಕಾಸು ಇಲಾಖೆಗೆ ಕಡತಕ್ಕೆ ಹೋಗಿದ್ದು ಅನುಮತಿ ಒಂದೇ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಟೆಂಡರ್ ಕೂಡ ಕರೆಯಲು ಸಾರಿಗೆ ಇಲಾಖೆ ಮುಂದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಬೇಕು ಅಂದರೆ, ಗ್ರಾಮ ಒನ್, ಬೆಂಗಳೂರು ಒನ್‌ನಲ್ಲಿ ಅರ್ಜಿ ಹಾಕಿದರೆ, ಸ್ಮಾರ್ಟ್ ಕಾರ್ಡ್ ಸಿಗಲಿದೆ.

       ಸರ್ಕಾರದಿಂದ ಪ್ರತ್ಯೇಕ ಸ್ಮಾರ್ಟ್ ಕಾರ್ಡ್ ವಿತರಣೆ ಇರಲ್ಲ. ಸ್ಮಾರ್ಟ್ ಕಾರ್ಡ್ ಪಡೆಯುವ ವೇಳೆ ನಕಲಿ ಆಧಾರ್ ಕಾರ್ಡ್ ನೀಡಿ ಸಿಕ್ಕಿಬಿದ್ದರೆ ನಿಮ್ಮ ಅರ್ಜಿಯನ್ನೇ ರದ್ದುಗೊಳಿಸುವ ಸಾಧ್ಯತೆಯಿದೆ. ಪ್ರಿಂಟ್ ಆದ ಮಾಹಿತಿಯುಳ್ಳ ದಾಖಲೆಯೇ ಸ್ಮಾರ್ಟ್ ಕಾರ್ಡ್ ಆಗಿರಲಿದೆ. ಮಾಸಿಕ ಪಾಸಿನಂತೆ ಪ್ರತ್ಯೇಕ ಪಾಸ್ ವಿತರಣೆ ಇರಲ್ಲ. ಅರ್ಜಿ ಸಲ್ಲಿಸಿದ ಕೂಡಲೇ ನೀಡಲಾಗುವ ಪ್ರಿಂಟ್‍ಔಟ್ ಅನ್ನು ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ.

    ಸೇವಾಸಿಂಧು ವೆಬ್‍ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಧಾರ್ ಕಾರ್ಡನ್ನು ದಾಖಲೆಯಾಗಿ ಪರಿಗಣಿಸಿ ರಾಜ್ಯದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗತ್ತದೆ. ಕರ್ನಾಟಕ ರಾಜ್ಯದ ನಿವಾಸಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿ ಕೇವಲ ಕರ್ನಾಟಕದೊಳಗಿನ ವಿಳಾಸ ಇರಬೇಕು.

Post navigation

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…
ಮುದ್ದಂಡ ಕಪ್‌ ಹಾಕಿ ಉತ್ಸವದಲ್ಲಿ ಬೊಡಿನಮ್ಮೆ ಸ್ಪರ್ಧೆ

Related Posts

ಪ್ರವಾಸೋದ್ಯಮ  ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ…

ಪ್ರವಾಸೋದ್ಯಮ  ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ…

29/05/202529/05/2025nadubadenews@gmail.com
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ

25/07/202525/07/2025nadubadenews@gmail.com

ನಡುಬಾಡೆ ನ್ಯೂಸ್‌ 23.8.25

23/08/202523/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us