Site icon nadubadenews.com

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…
Spread the love
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…

ಮಡಿಕೇರಿ, ಏ.14; ಮಡಿಕೇರಿಯಲ್ಲಿ ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ನಡೆದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕಾರ್ಯಗಾರವನ್ನು ಕೊಡಗು- ಮೈಸೂರು ಲೋಕಸಭಾ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು.

ಈ ಸಂದರ್ಭ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಕೂಡ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸ್ವಾವಲಂಬಿಗಳಾದರೆ ಮಾತ್ರ ಮಾನ್ಯ ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕನಸು ಈಡೇರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Exit mobile version