Site icon nadubadenews.com

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಮತ್ತಷ್ಟು ತಡ…

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಮತ್ತಷ್ಟು ತಡ…
Spread the love
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಮತ್ತಷ್ಟು ತಡ…

ಬೆಂಗಳೂರು, ಅ.02 : ಕರ್ನಾಟಕ ಅಧಿಕಾರ ವಿಕೇಂದ್ರೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ, ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಯದೆ ಹಲವಾರು ವರ್ಷಗಳೆ ಕಳೆದಿವೆ. ಇದೀಗ ನ್ಯಾಯಾಲಯದ ತೀರ್ಮಾನದಿಂದ ಮತ್ತಷ್ಟು ವಿಳಂಬವಾಗಲಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಸಿದ್ದು, ಒಂದು ತಿಂಗಳು ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರ ಪುನರ್‌ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ 2023ರಲ್ಲಿ ನ್ಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಒಂದು ತಿಂಗಳು ಮುಂದೂಡಿದೆ. ಈ ಮೂಲಕ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೆ ನಿರಾಸೆಯಾಗಿದ್ದಷ್ಟೇ ಅಲ್ಲ, ಸ್ಥಳೀಯ ಅಭಿವೃದ್ದಿ ಕಾರ್ಯಗಳಿಗೂ ಹಿನ್ನಡೆಯಾಗೆದೆ.

Exit mobile version