https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಜಿ.ಪಂ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಅರಣ್ಯ ಹಕ್ಕು ಕೋಶ

News, Informatin , Enteetinement and Advertisement
23/06/202523/06/2025nadubadenews@gmail.comLeave a Comment on ಜಿ.ಪಂ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಅರಣ್ಯ ಹಕ್ಕು ಕೋಶ
Spread the love

ಮಡಿಕೇರಿ ಜೂ.23(nadubadewarthe):-ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ.
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಈ ಕೋಶ ಕಾರ್ಯನಿರ್ವಹಿಸಲಿದ್ದು, ಈಗಾಗಲೇ ಅರಣ್ಯ ಹಕ್ಕುಪತ್ರವನ್ನು ಪಡೆದಿರುವ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದು ಮತ್ತು ಸಂಗ್ರಹವಾಗಿರುವ ದತ್ತಾಂಶಗಳನ್ನು ಡಿಜಿಟಲೀಕರಣಗೊಳಿಸುವುದು ಅರಣ್ಯ ಹಕ್ಕು ಕೋಶದ ಪ್ರಮುಖ ಕಾರ್ಯವಾಗಿರುತ್ತದೆ ಎಂದು ಎಸ್.ಹೊನ್ನೇಗೌಡ ಅವರು ಮಾಹಿತಿ ನೀಡಿದರು.
ಅರಣ್ಯ ಹಕ್ಕು ಪತ್ರ ಹೊಂದಿಲ್ಲದವರ ಮತ್ತು ಅರ್ಜಿ ಸಲ್ಲಿಸಿ ತಿರಸ್ಕøತಗೊಂಡಿರುವ ಕುಟುಂಬಗಳ ಕುರಿತು ಪುನರ್ ಪರಿಶೀಲನೆ ನಡೆಸಿ ಅರ್ಹ ಅರಣ್ಯವಾಸಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಅರಣ್ಯ ಹಕ್ಕು ಕೋಶ ಪೂರಕವಾಗಿದೆ ಎಂದು ತಿಳಿಸಿದರು.
ಅರಣ್ಯಹಕ್ಕು ಕಾಯ್ದೆಯಡಿ ಜಿಲ್ಲೆಯಲ್ಲಿ 4277 ಅರ್ಜಿಗಳು ಸ್ವೀಕೃತವಾಗಿದ್ದು, 2430 ಅರ್ಜಿಗಳನ್ನು ಅನುಮೋದಿಸಲಾಗಿದೆ. ಈ ಮೂಲಕ ವೈಯಕ್ತಿಕ ಹಾಗೂ ಕಿರು ಅರಣ್ಯ ಸಂಗ್ರಹಣೆಗಾಗಿ 31967.82 ಎಕರೆ ಮಂಜೂರು ಮಾಡಲಾಗಿದೆ. 1847 ಅರ್ಜಿಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತ ಅರ್ಜಿಗಳ ಪುನರ್ ಪರಿಶೀಲನೆಗೆ ಅರಣ್ಯ ಹಕ್ಕು ನಿಯಮದ ಬಗ್ಗೆ ಸಲಹೆ ನೀಡಲು ಕೋಶದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಐಟಿಡಿಪಿ ಇಲಾಖೆ ಅಧಿಕಾರಿಗಳು ಹೇಳಿದರು.
ಈ ಕುರಿತಂತೆ ಯಾವುದೇ ದೂರು, ಸಲಹೆ ಮತ್ತು ಮಾಹಿತಿಗಳು ಬೇಕಿದ್ದಲ್ಲಿ ನೋಡಲ್ ಅಧಿಕಾರಿ ದೇವರಾಜ್ 9108813845, ಸಹಾಯಕ ನೋಡಲ್ ಅಧಿಕಾರಿ ಆಶಿಕ್ 8861957577, ತಾಂತ್ರಿಕ ಸಂಯೋಜಕರಾದ ಮಾದಯ್ಯ 9845771807, ತಾಂತ್ರಿಕ ಸಹಾಯಕ ಸಂಯೋಜಕರಾದ ಸಂಜಯ್ 7348841734 ರವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.

Post navigation

ನಾಳೆ ಹಲವೆಡೆ ಕರೆಂಟ್‌ ಇರಲ್ಲ
ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ, ನಡುಬಾಡೆನ್ಯೂಸ್‌ಗೆ ಉಸ್ತುವಾರಿ ಸಚಿವರ ಭರವಸೆ

Related Posts

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ

25/07/202525/07/2025nadubadenews@gmail.com
ನಾಳೆ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ…

ನಾಳೆ ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ…

08/08/202508/08/2025nadubadenews@gmail.com
ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….

ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….

10/05/202510/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version