https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆ ಸೂಚನೆ, ರೈತರಿಗೆ ಆತಂಕ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆ ಸೂಚನೆ, ರೈತರಿಗೆ ಆತಂಕ…

Uncategorized
08/10/202408/10/2024nadubadenews@gmail.comLeave a Comment on ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆ ಸೂಚನೆ, ರೈತರಿಗೆ ಆತಂಕ…
Spread the love
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕೊಡಗು ಸೇರಿದಂತೆ ಹಲವೆಡೆ ಭಾರೀ ಮಳೆ ಸೂಚನೆ, ರೈತರಿಗೆ ಆತಂಕ…

ಬೆಂಗಳೂರು, ಅ.08 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮಲೆನಾಡಿನ ಶಿವಮೊಗ್ಗ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಎಂದು ಹವಾಮಾನ ಇಲಾಖೆ (IMD) ಹೇಳಿದೆ.

ಅಲ್ಲದೇ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಕಾಯಿಯಾಗಿರುವ ಕೊಡಗಿನ ಕಾಫಿ, ಭತ್ತ, ಏಲಕ್ಕಿ ಸೇರಿದಂತೆ ಎಲ್ಲಾ ಬೆಳೆಗಳಿಗೂ ಅಪಾಯವಿದ್ದು, ರೈತರು ತಮ್ಮ ಮುಂದಿನ ಭವಿಷ್ಯವನ್ನು ನೆನೆದು ಆತಂಕ ಪಡುವಂತಾಗಿದೆ.

Post navigation

ಸುಟ್ಟು ಕರಕಲಾದ ವ್ಯಕ್ತಿಯ ಗುರುತು ಪತ್ತೆಗೆ ಸಕರಿಸಲು, ಪೊಳೀಸರ ಮನವಿ…
ರಾಜ್ಯಮಟ್ಟದಮೈಸೂರುದಸರಾಲಲಿತಕಲೆ ಚಿತ್ರ ಕುರಿಲ್‌ ಐಮಂಡ ರೂಪೇಶ್‌ ನಾಣಯ್ಯಂಗ್‌ ಬಿರ್‌ದ್…

Related Posts

ಗಣರಾಜ್ಯೋತ್ಸವ ಮೋಪುಕ್‌ ಅರೆಯಡ ಶಾನ್‌ಬಿದ್ದಪ್ಪ

ಗಣರಾಜ್ಯೋತ್ಸವ ಮೋಪುಕ್‌ ಅರೆಯಡ ಶಾನ್‌ಬಿದ್ದಪ್ಪ

02/01/202502/01/2025nadubadenews@gmail.com

ಅಂತರ್‌ಜಿಲ್ಲಾ ಶ್ರೀಗಂಧ ಕಳ್ಳರನ್ನ ಬಂಧಿಸಿದ ಅರಣ್ಯಾಧಿಕಾರಿಗಳು

27/12/202427/12/2024nadubadenews@gmail.com
ಏಷ್ಯನ್‌ ಪಂಜಕುಸ್ತಿಯಲ್ಲಿ ದೇಶಕ್ಕೆ ಕಂಚು ತಂದ, ಕೊಡಗಿನ ಹಸನ್‌

ಏಷ್ಯನ್‌ ಪಂಜಕುಸ್ತಿಯಲ್ಲಿ ದೇಶಕ್ಕೆ ಕಂಚು ತಂದ, ಕೊಡಗಿನ ಹಸನ್‌

25/10/202425/10/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version