ಮಡಿಕೇರಿ ಮೇ.14(Nadubade News): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರ ಸಂಘ, ಪುತ್ತೂರು ವಿಭಾಗ ವತಿಯಿಂದ ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ವಿಶ್ವರತ್ನ, ವಿಶ್ವಜ್ಞಾನಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಸಮಾರಂಭವು ಮೇ, 16 ರ ಶುಕ್ರವಾರದಂದು ಬೆಳಗ್ಗೆ 10.30 ಗಂಟೆಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ.
ಮೇ, 16 ರಂದು ಬೆಳಗ್ಗೆ 8.30 ಗಂಟೆಗೆ ಕೆಎಸ್ಆರ್ಟಿಸಿ ಬಸ್ ಘಟಕದಿಂದ ಭೀಮರಥ ಮೆರವಣಿಗೆ ನಡೆಯಲಿದೆ. ಮೈಸೂರು ಗಾಂಧಿನಗರ ಶಿವಯೋಗಿ ಉರಿಲಿಂಗ ಪೆದ್ದಿಮಠದ ಪೀಠಾಧ್ಯಕ್ಷರಾದ ಶ್ರೀ ಜ್ಞಾನಪ್ರಕಾಶ ಸ್ವಾಮಿಜಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕ.ರಾ.ರ.ಸಾ.ಸಂ.ಪ.ಜಾ/ಪ.ಪಂ. ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಎಫ್.ಹೆಚ್.ಜಕ್ಕಪ್ಪನವರ, ಕರಾರಸಾಸಂ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಆಮಲಿಂಗಯ್ಯ ಬಿ.ಹೊಸ ಪೂಜಾರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಕರಾರಸಾ ಸಂಸ್ಥೆ ಕೇಂದ್ರ ಕಚೇರಿಯ ಮುಖ್ಯ ಕಾನೂನು ಅಧಿಕಾರಿ ಟಿ.ವೆಂಕಟೇಶ್, ಕರಾರಸಾಸಂಸ್ಥೆಯ ಕೇಂದ್ರ ಕಚೇರಿಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಜಿ.ಎನ್.ಲಿಂಗರಾಜು, ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಎಚ್.ಡಿ.ಗೌರಾಂಬ, ಮುಖ್ಯ ಸಂಚಾರಿ ವ್ಯವಸ್ಥಾಪಕರಾದ ಆಂಥೋನಿ ಜಾರ್ಜ್, ಕರಾರಸಾಸಂಸ್ಥೆ ಪ.ಜಾ/ಪ.ಪಂ.ನೌಕರರ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಎಂ.ರವಿಪ್ರಕಾಶ್, ಕರಾರಸಾಸಂಸ್ಥೆ ಪ.ಜಾ/ಪ.ಪಂ.ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರವಣಪ್ಪ, ರಾಜ್ಯ ಉಪಾಧ್ಯಕ್ಷರಾದ ಬಿ.ಸುಂದರಮ್ಮ, ಬೆಂ.ಮ.ಸಾ.ಸಂ.ಪ.ಜಾ/ಪ.ಪಂ.ನೌಕರರ ಸಂಘದ ಅಧ್ಯಕ್ಷರಾದ ಮುನಿನಾರಾಯಣಸ್ವಾಮಿ ಎನ್., ರಾಜ್ಯ ಉಪಾಧ್ಯಕ್ಷರಾದ ಅಶೋಕ್ ರಾ.ಭಜಂತ್ರಿ, ರಾಜ್ಯ ಖಜಾಂಚಿ ವೆಂಕಟೇಶಮೂರ್ತಿ, ರಾಜ್ಯ ಉಪಾಧ್ಯಕ್ಷರಾದ ಗಂಗಾಧರ ಕಮಲದಿನ್ನಿ, ರಾಜ್ಯ ಜಂಟಿ ಕಾರ್ಯದರ್ಶಿ ಎಸ್.ಎ.ನಾಗರಾಜ್(ಬುಲೆಟ್), ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.