Site icon nadubadenews.com

ವಿದ್ಯುತ್‌ ಸರಬರಾಜಿನಲ್ಲಿ ಅಡಚಣೆ ಸಹಾಯವಾಣಿ ಕೇಂದ್ರ ಆರಂಭ…

Spread the love

 ಮಡಿಕೇರಿ ಏ.29 : ಕೊಡಗು ಜಿಲ್ಲೆಯಾದ್ಯಂತ ಆಗಾಗ ಮಳೆ ಬೀಳುತ್ತಿದ್ದು, ಗಾಳಿಯೂ ಸಹ ಇದೆ. ಹೆಚ್ಚಿನ ಬಿರುಗಾಳಿಯಿಂದ ವಿದ್ಯುತ್‌ ಸರಬರಾಜಿನಲ್ಲಿ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ.

      ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‌ಆಪ್ ಮೂಲಕ ಫೋಟೋ ಸಂದೇಶ ನೀಡಬಹುದಾಗಿದೆ. ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‌ನ ದೂ.ಸಂ. 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665 ಆಗಿದೆ.

      ಮಡಿಕೇರಿ ತಾಲ್ಲೂಕಿನ ಮಡಿಕೇರಿ ತಾಳತ್‌ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್ ಮಡಿಕೇರಿಗೆ ಚೈತ್ರ 9449598603, ತಾಳತ್‌ಮನೆ ಹೇಮಂತ್ ರಾಜ್ 9449598604, ಮೂರ್ನಾಡು ಶಾಖೆಗೆ ತೇಜ 9449598605, ಸಂಪಾಜೆಗೆ ಅನಿಲ್ ಕುಮಾರ್ 9448994851, ಭಾಗಮಂಡಲ ಹರಿಣಾಕ್ಷಿ 9480810344, ನಾಪೋಕ್ಲು ಶಾಖೆಗೆ ಹರೀಶ್ 9449598606 ಹಾಗೂ ಗ್ರಾಹಕರ ಸೇವಾ ಕೇಂದ್ರ ದೂ.ಸಂ. 08272-248454 ಮತ್ತು 9449598665 ಆಗಿರುತ್ತದೆ.

     ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಮಾದಾಪುರ, ಚೆಟ್ಟಳ್ಳಿ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ 9449598538, ಸಹಾಯಕ/ಜೂನಿಯರ್ ಎಂಜಿನಿಯರ್‌‌ಗಳು ಸುಂಟಿಕೊಪ್ಪ ಶಾಖೆಗೆ ಲವಕುಮಾರ್ ಕೆ.ಎ. 9449598615, ಕುಶಾಲನಗರ ಸೋಮೇಶ್ ಕೆ.ವಿ. 9449598589, ಕೂಡಿಗೆ ಶಾಖೆಗೆ ರಾಣಿ 9449598613,  ಮಾದಾಪುರ ನಿರಂಜನ್ ಎಸ್ ಜಿ 9449598588, …

     ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ, ಅಮ್ಮತ್ತಿ, ಸಿದ್ದಾಪುರ, ಪಾಲಿಬೆಟ್ಟ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ 9480837545, ಸಹಾಯಕ/ಜೂನಿಯರ್ ಎಂಜಿನಿಯರ್‌ಗಳು ವಿರಾಜಪೇಟೆಗೆ ಅಭಿಷೇಕ್ 9449598610, ಅಮ್ಮತ್ತಿ ಮನೋಜ್ 9448994344, ಸಿದ್ದಾಪುರ ಶಾಖೆಗೆ ಸ್ವರಾಗ್ 9449598611, ಪಾಲಿಬೆಟ್ಟ ಶಿವರಾಜ 9448994341, ಗ್ರಾಹಕರ ಸೇವಾ ಕೇಂದ್ರದ ಸಂಖ್ಯೆ 9448289410 ಆಗಿರುತ್ತದೆ.

     ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು, ಶ್ರೀಮಂಗಲ, ಬಾಳೆಲೆ ಹಾಗೂ ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ 9449598607, ಸಹಾಯಕ/ಜೂನಿಯರ್ ಎಂಜಿನಿಯರ್‌ಗಳು ಗೋಣಿಕೊಪ್ಪ ಶಾಖೆಗೆ ಹೇಮಂತ್ 9449598608, ಶ್ರೀಮಂಗಲ ನಾಗೇಂದ್ರ ಪ್ರಸಾದ್ 9449598609, ಬಾಳೆಲೆ ಶಾಖೆಗೆ ರಂಗಸ್ವಾಮಿ 9449597484, ಗ್ರಾಹಕರ ಸೇವಾ ಕೇಂದ್ರ 9448283394 ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಎಂ.ರಾಮಚಂದ್ರ ದೂ.ಸಂ. 9449598601 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version