
ವಿರಾಜಪೇಟೆ,ಜ.08: (ಅಮ್ಮಂಡ ಅನುಪಮ ತಿಮ್ಮಯ್ಯ) ಕಾವೇರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆಯಲ್ಲಿ ಪೋಷಕ- ಅಧ್ಯಾಪಕರ ಸಭೆಯನ್ನು ದಿನಾಂಕ 08/01/2025ರ ಬುಧವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ, ಪ್ರಾಂಶುಪಾಲ ಶ್ರೀ ಎನ್.ಎಂ ನಾಣಯ್ಯ ಅವರು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನದಲ್ಲಿ ಪೋಷಕರ ಪಾತ್ರ ಮಹತ್ತರವಾದದ್ದು. ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಹೆಚ್ಚಿನ ಸಮಯವನ್ನು ಓದಿಗೆ ಮೀಸಲಿಡಬೇಕು, ಜೊತೆಗೆ ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕಿವಿಮಾತಿನೊಂದಿಗೆ, ಕಾಲೇಜಿನ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಹಾಜರಿದ್ದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ, ಶ್ರೀಮತಿ ಎಂ.ಪಿ ದಮಯಂತಿ ಅವರು, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಪರೀಕ್ಷೆ, ಆಂತರಿಕ ಮೌಲ್ಯಮಾಪನದ ಬಗ್ಗೆ ಪೋಷಕರಿಗೆ ತಿಳಿಸಿಕೊಟ್ಟರು.
2025-2026ನೇ ಸಾಲಿನ ಶೈಕ್ಷಣಿಕ ವರ್ಷದ ಪೋಷಕ ಮತ್ತು ಅಧ್ಯಾಪಕ ಸಭೆಯ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಕೃಪಾ ಚಂಗಪ್ಪ ಹಾಗೂ ಸದಸ್ಯರುಗಳಾಗಿ ಶ್ರೀಮತಿ ಹೆಚ್ ಎನ್. ಶೋಭಾ ಮತ್ತು ಶ್ರೀ ಪ್ರವೀಣ್ ರವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಸರ್ವ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.
ಆರಂಭದಲ್ಲಿ ಕುಮಾರಿ ಹರ್ಷ ಮತ್ತು ತಂಡದವರು ಪ್ರಾರ್ಥಿಸಿದರು. ಸಭೆಯಲ್ಲಿ ಹಾಜರಿದ್ದ ಸರ್ವರನ್ನು ಶಿಕ್ಷಕ ಮತ್ತು ಪೋಷಕ ಸಂಘದ ಸಂಚಾಲಕಿ ಶ್ರೀಮತಿ ಎಂ.ಬಿ. ದೇಚಮ್ಮ ಸ್ವಾಗತಿವಸಿ, ಉಪನ್ಯಾಸಕಿ ಶ್ರೀಮತಿ ಅನುಪಮತಿಮ್ಮಯ್ಯ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕಿ ಶ್ರೀಮತಿ ಗಾಯತ್ರಿ ನೆರವೇರಿಸಿದರು.