Site icon nadubadenews.com

ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿರಾಜಪೇಟೆ ಕಾವೇರಿ ಕಾಲೇಜಿನ  ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ
Spread the love
ವಿರಾಜಪೇಟೆ ಕಾವೇರಿ ಕಾಲೇಜಿನ  ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

          ವಿರಾಜಪೇಟೆ, ಜೂ. 06: (nadubadenews) : ಕಾವೇರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆಯ 2025-2026ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ದಿನಾಂಕ 06.06.2025ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು..

    ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎನ್.ಎಂ. ನಾಣಯ್ಯನವರು, ಕಾಲೇಜಿನ ಕಾರ್ಯ ಚಟುವಟಿಕೆಗಳು ಹಾಗೂ ಶೈಕ್ಷಣಿಕ ಚಟುವಟಿಗಳು ಮತ್ತು ಕಾಲೇಜಿನಲ್ಲಿರುವ ಸವಲತ್ತುಗಳ ಬಗ್ಗೆ  ಸಂಪೂರ್ಣ  ಮಾಹಿತಿ ನೀಡಿದರಲ್ಲದೆ, ಯುವಜನತೆ ಹದಿ ಹರೆಯದಲ್ಲಿ ದುಶ್ಚಟಗಳಿಗೆ ಬಲಿಯಾಗದಂತೆ ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಸಾಧನೆಯನ್ನು ಮಾಡುವುದರ ಮೂಲಕ ಕಾಲೇಜಿಗೆ ಹಾಗೂ ಹೆತ್ತವರಿಗೆ ಉತ್ತಮ ಕೀರ್ತಿ ತರಬೇಕೆಂದು  ಹಿತವಚನ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ  ವಿದ್ಯಾರ್ಥಿಗಳಾದ ಕುಮಾರಿ ಭೂಮಿಕಾ ಮತ್ತು ತಂಡದವರು ಪ್ರಾರ್ಥಿಸಿ, ಕನ್ನಡ ಉಪನ್ಯಾಸಕರಾದ  ಶ್ರೀಮತಿ ದಮಯಂತಿ ಎಂ.ಪಿ. ಸರ್ವರನ್ನು ಸ್ವಾಗತಿಸಿದರೆ ಇತಿಹಾಸ ಉಪನ್ಯಾಸಕರಾದ ಶ್ರೀಮತಿ ಅನುಪಮ ಸಿ. ಪಿ. ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಶಕರು, ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Exit mobile version