https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

News, Informatin , Enteetinement and Advertisement
01/06/202501/06/2025nadubadenews@gmail.comLeave a Comment on ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   
Spread the love
ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

ವಿರಾಜಪೇಟೆ ಜೂ.01 (Nadubade News): ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ (ರಿ) ವತಿಯಿಂದ, ರಾಜ್ಯಾದ್ಯಂತ ನಡೆಯುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರದ ಭಾಗವಾಗಿ, ವಿರಾಜಪೇಟೆಯ ಪೌರ ಸೇವಾ ನೌಕರರು, ವಿರಾಜಪೇಟೆಯ ಪುರಾಸಭೆ ಆವರಣದಲ್ಲಿ ಮುಷ್ಕರದಲ್ಲಿ ತೊಡಗಿದರು.   ಪೌರ ಸೇವಾ ನೌಕರರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಈ ಪ್ರತಿಭಟನೆ ನಡೆಯುತ್ತಿದೆ.    ವಿರಾಜಪೇಟೆಯಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮಾನ್ಯ ಶಾಸಕರು, ಪುರಸಭೆ ನೌಕರರನ್ನು ಮಾತನಾಡಿಸಿ ಅವರ ಬೇಡಿಕೆಗಳನ್ನು ಆಲಿಸಿದರು. ಬಳಿಕ ವಿರಾಜಪೇಟೆಯಲ್ಲಿ ತಾವು ಪುರಸಭೆ ನೌಕರರ ಬೇಡಿಕೆಗಳಿಗೆ ಈ ಹಿಂದೆ ಸ್ಪಂದಿಸಿರುವುದನ್ನು ನೆನಪಿಸಿದ ಮಾನ್ಯ ಶಾಸಕರು, ಪ್ರತಿಭಟನೆಯನ್ನು ಕೈ ಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಮನವಿ ಮಾಡಿದರು.  ಮೊದಲಿಗೆ ಪುರಸಭೆ ನೌಕರರ ಸಂಘದ ಪದಾಧಿಕಾರಿಯೊಬ್ಬರು ಇದಕ್ಕೆ ಒಪ್ಪದಿದ್ದಾಗ, ಮಾನ್ಯ ಶಾಸಕರು ನೈರ್ಮಲ್ಯ ವಿಷಯದಲ್ಲಿ ಯಾವುದೇ ರಾಜಿ ಮಾಡಲು ಸಾಧ್ಯ ಇಲ್ಲದಿರುವುದರಿಂದ ತಾವೇ ಖುದ್ದಾಗಿ ಸ್ವಚ್ಛತಾ ಕಾರ್ಯ ಮಾಡುವುದಾಗಿ ತಿಳಿಸಿ, ಸ್ವತ ಸ್ವಚ್ಛತ ವಾಹನದ ಚಾಲಕ ಸ್ಥಾನದಲ್ಲಿ ಕುಳಿತುಕೊಂಡರು.           ಶಾಸಕರ ಕಾರ್ಯ ವೈಖರಿಯ ಬಗ್ಗೆ ಅಪಾರ ಮೆಚ್ಚುಗೆ ಹಾಗೂ ಭರವಸೆ ಇರುವ ವಿರಾಜಪೇಟೆ ಪುರಸಭೆ ನೌಕರರು, ಕೂಡಲೇ ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾದರು.   

ಪುರಸಭೆ ದಿನಗೂಲಿ ನೌಕರರ ಮನವೊಲಿಸುವ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಥಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹಾಗೂ ಉಪಾಧ್ಯಕ್ಷೆ ಮತ್ತು ಸದಸ್ಯರು,  ಸರಕಾರದ ವಿವಿಧ ನಾಮನಿರ್ದೇಶಕ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Post navigation

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…
     ಭಾರತೀಯ ನೇವಿ ಅಧಿಕಾರಿಯಾನ ಕಾಡ್ಯಮಾಡ ರಿಯಾ ಅಚ್ಚಯ್ಯ

Related Posts

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್ ನಾಳ್…

23/05/202523/05/2025nadubadenews@gmail.com

ಪೊನ್ನಂಪೇಟೆ ಕೊಡವ ಸಮಾಜಕ್‌ ಕಾಳಿಮಾಡ ಮೋಟಯ್ಯ ಕೂಟ್‌ಕಾರಕ್‌ ಓಟ್‌ಮಾಡಿತ್‌ ಗೆಲ್ಲ್‌ಚಿಡೀ…

28/05/202528/05/2025nadubadenews@gmail.com
ಕೊಡಗಿನಲ್ಲಿ ಮೀನು ಹಿಡಿಯುವ ಹಾಗಿಲ್ಲ…

ಕೊಡಗಿನಲ್ಲಿ ಮೀನು ಹಿಡಿಯುವ ಹಾಗಿಲ್ಲ…

30/05/202530/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version