https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ಸಂಸ್ಕಾರ ಕಲಿಸುತ್ತಿದೆ.; ಯೋಜನಾಧಿಕಾರಿಯವರಾದ ಪುರುಷೋತ್ತಮ ಅಭಿಮತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ಸಂಸ್ಕಾರ ಕಲಿಸುತ್ತಿದೆ.; ಯೋಜನಾಧಿಕಾರಿಯವರಾದ ಪುರುಷೋತ್ತಮ ಅಭಿಮತ

News, Informatin , Enteetinement and Advertisement
15/07/202515/07/2025nadubadenews@gmail.comLeave a Comment on ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ಸಂಸ್ಕಾರ ಕಲಿಸುತ್ತಿದೆ.; ಯೋಜನಾಧಿಕಾರಿಯವರಾದ ಪುರುಷೋತ್ತಮ ಅಭಿಮತ
Spread the love
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ಸಂಸ್ಕಾರ ಕಲಿಸುತ್ತಿದೆ.; ಯೋಜನಾಧಿಕಾರಿಯವರಾದ ಪುರುಷೋತ್ತಮ ಅಭಿಮತ

ಹಾಕತ್ತೂರು; ಜು.15;(nadubadenews): ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯದ ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ತೊಂಬತ್ತುಮನೆ ತ್ರಿನೇತ್ರ ಯುವಕ ಸಂಘದ  ಸಭಾಂಗಣದಲ್ಲಿ  ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪಂದನ ಜ್ಞಾನವಿಕಾಸ ಕೇಂದ್ರದ ಸದಸ್ಯರಾದ ವಿಮಲ ವಹಿಸಿದ್ದರು.  ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರಾದ ಪಿ. ಪಿ. ಸುಕುಮಾರರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ,  ಮಹಿಳೆಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಈ ಜ್ಞಾನ ವಿಕಾಸ ಕೇಂದ್ರ ಸಹಕಾರಿ ಆಗಿದೆ ಎಂದು ತಿಳಿಸಿದರು. ಹೆಚ್ಚು ಮಹಿಳೆಯರು ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುವಂತೆ ಅವರು ಈ ಸಂದರ್ಭ ಕರೆಯಿತ್ತರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ಯೋಜನಾಧಿಕಾರಿಯವರಾದ ಪುರುಷೋತ್ತಮ ಅವರು ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಎಲ್ಲಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು, ಅವರವರ ಜೀವನದಲ್ಲಿ ಮತ್ತು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರವನ್ನು  ಬೆಳೆಸುತ್ತಾ ಬರುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿರುವ ಬಗ್ಗೆ, ಸ್ವ ಉದ್ಯೋಗ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸುವ ಬಗ್ಗೆ ತಿಳಿಸಿದರು.

ಕೇಂದ್ರದ ವಾರ್ಷಿಕ ವರದಿಯನ್ನು  ಹಾಕತ್ತೂರು ಒಕ್ಕೂಟದ ಕಾರ್ಯದರ್ಶಿ ಹರಿಣಿ  ಮಂಡನೆ ಮಾಡಿದರು. ವೇದಿಕೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಹರಿಣಿ , ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಮೇಲ್ವಿಚಾರಕಿ ವಿದ್ಯಾ,  ಸೇವಾಪ್ರತಿನಿಧಿ ಕವಿತಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಪಂದನ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿ, ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಮಡಿಕೇರಿ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಮಾಲಿನಿಯವರು ನೆರವೇರಿಸಿ, ಸೇವಾಪ್ರತಿನಿಧಿ ಕವಿತಾ ಸ್ವಾಗತಿಸಿ, ವಂದಿಸಿದರು.

Post navigation

ಹುದಿಕೇರಿಪ್ರಾಥಮಿಕಆರೋಗ್ಯಕೇಂದ್ರಸಮುದಾಯಆರೋಗ್ಯಕೇಂದ್ರವನ್ನಾಗಿಮೇಲ್ದರ್ಜೆಗೆ
ಕೊಡಗಿನ ಜಮ್ಮಬಾಣೆ, ಪಟ್ಟೇದಾರ, ಪಹಣಿ ಸಮಸ್ಯೆ ನಿವಾರಣೆಗೆ, ಕಾಯ್ದೆ ತಿದ್ದುಪಡಿಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಪ್ರಸ್ತಾವನೆ. 

Related Posts

ಗೌಡ ಸಮುದಾಯಭವನಕ್ಕೆ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ ಭಾಗಮಂಡಲ ಗೌಡ ಸಮಾಜ ಪ್ರಮುಖರು

ಗೌಡ ಸಮುದಾಯಭವನಕ್ಕೆ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ ಭಾಗಮಂಡಲ ಗೌಡ ಸಮಾಜ ಪ್ರಮುಖರು

15/07/202515/07/2025nadubadenews@gmail.com
ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ, ನಡುಬಾಡೆನ್ಯೂಸ್‌ಗೆ ಉಸ್ತುವಾರಿ ಸಚಿವರ ಭರವಸೆ

ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ, ನಡುಬಾಡೆನ್ಯೂಸ್‌ಗೆ ಉಸ್ತುವಾರಿ ಸಚಿವರ ಭರವಸೆ

25/06/202525/06/2025nadubadenews@gmail.com
ಚೆಟ್ಟಳ್ಳಿಯಲ್ಲಿ ಗ್ರಾಮೀಣ ಸೊಗಡಿನ ಕಕ್ಕಡ-18 ಆಚರಣೆ

ಚೆಟ್ಟಳ್ಳಿಯಲ್ಲಿ ಗ್ರಾಮೀಣ ಸೊಗಡಿನ ಕಕ್ಕಡ-18 ಆಚರಣೆ

07/08/202507/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version