https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

News, Informatin , Enteetinement and Advertisement
25/03/202525/03/2025nadubadenews@gmail.comLeave a Comment on ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ
Spread the love
ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

ಮಡಿಕೇರಿ ಮಾ.25:- ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ಈ ಮೂಲಕ ತಿಳಿಸಲಾಗಿದೆ. ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.
ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : ddkodagutourism@gmail.com ಗೆ ತಿಳಿಸಬಹುದು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್‍ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ http://kttf.karnatakatourism.org/ನಲ್ಲಿ ತಮ್ಮ ಸಂಸ್ಥೆಯನ್ನು ನೊಂದಣಿ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ಕೋರಿದ್ದಾರೆ.

Post navigation

25ನೇ ಹಾಕಿ ನಮ್ಮೆ ಮುದ್ದಂಡ ಕಪ್‌ರ  ತಿರಿ ಕತ್ತ್‌ಚಿಟ್ಟ ಖನ ಪಟ್ಟವು…
ಬೆಂಗಳೂರ್‌ ಕೊಡವ ಸಮಾಜ ಪೈಪೋಟಿ ರಂಗ್‌ : ಓಟ್‌ಕಳತ್‌ ಬಾಳೆಯಡ ಕರುಣ್‌ ಕಾಳಪ್ಪ

Related Posts

ಅರೆಭಾಷೆ ಗೌಡ ಜನಾಂಗಕ್ಕೆ ಅನುಕೂಲ ಮಾಡಿದ್ದು  ಕಾಂಗ್ರೆಸ್‌ ಮಾತ್ರ; ಸೂರ್ತಲೆ ಸೋಮಣ್ಣ ಅಭಿಮತ

ಅರೆಭಾಷೆ ಗೌಡ ಜನಾಂಗಕ್ಕೆ ಅನುಕೂಲ ಮಾಡಿದ್ದು  ಕಾಂಗ್ರೆಸ್‌ ಮಾತ್ರ; ಸೂರ್ತಲೆ ಸೋಮಣ್ಣ ಅಭಿಮತ

22/07/202522/07/2025nadubadenews@gmail.com
ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿಗೆ ಅರ್ಜಿ ಆಹ್ವಾನ

ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿಗೆ ಅರ್ಜಿ ಆಹ್ವಾನ

22/07/202522/07/2025nadubadenews@gmail.com
ನಾಳೆ ಪ್ರಕಟಗೊಳ್ಳಲಿದೆ  ಎಸ್.ಎಸ್.ಎಲ್.ಸಿ-1ರ ಫಲಿತಾಂಶ…

ನಾಳೆ ಪ್ರಕಟಗೊಳ್ಳಲಿದೆ  ಎಸ್.ಎಸ್.ಎಲ್.ಸಿ-1ರ ಫಲಿತಾಂಶ…

01/05/202501/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version