
ವಿರಾಜಪೇಟೆ, ಫೆ.24: ಕರ್ನಾಟಕ ರಾಜ್ಯ ಸರಕಾರದ ಕುಕ್ಕಟ ಮಹಾಮಂಡಳ ವತಿಯಿಂದ ಗ್ರಾಮೀಣ ಮಹಿಳೆಯರಿಗೆ ನಾಟಿ ಕೋಳಿಗಳ ಮರಿ ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಭಾಗವಹಿಸಿ. ಆಯ್ದ ಫಲಾನುಭವಿಗಳಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಿದರು.
ವಿರಾಜಪೇಟೆಯ ಪಶು ವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಶಾಸಕರು, ರಾಜ್ಯ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಆ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಒಂದು ಭಾಗವಾಗಿ ಇಂದಿನ ಕಾರ್ಯಕ್ರಮ ನಡೆಯುತ್ತಿದೆ, ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಂಡು ಸ್ವಾವಲಂಬಿ ಆಗುವ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಪುರಸಭಾ ಅಧ್ಯಕ್ಷೆ ಮನೆಯಪಂಡ ದೇಚಮ್ಮಕಾಳಪ್ಪ ಸೇರಿದಂತೆ ಪುರಸಭಾ ಸದಸ್ಯರು, ಮಾಜೀ ಸದಸ್ಯರು, ಕಾರ್ಯಕ್ರಮ ಆಯೋಜಕರು ಹಾಗೂ ಪ್ರಮುಖಕರು ಉಪಸ್ಥಿತರಿದ್ದರು.