https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ  ಅರ್ಜಿ ಆಹ್ವಾನ…

News, Informatin , Enteetinement and Advertisement
26/04/202526/04/2025nadubadenews@gmail.comLeave a Comment on ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ  ಅರ್ಜಿ ಆಹ್ವಾನ…
Spread the love

   ಮಡಿಕೇರಿ ಏ.25:- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ವತಿಯಿಂದ 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

      ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ಸಿಇಟಿ/ನೀಟ್ ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿಇ/ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲ ನೀಡಲಾಗುತ್ತದೆ.

      ಸಿಇಟಿ/ ನೀಟ್ ಮುಖೇನ ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‍ಸೈಟ್  https://kmdconline.karnataka.gov.in/   ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

      ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ. ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋರ್ಟ್ ಸೈಜ್), ಸಿಇಟಿ/ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ.100 ರ ಛಾಪಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಆಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಯ ದೂ.ಸಂ. 08272-201449 ನ್ನು ಸಂಪರ್ಕಿಸಬಹುದು. “ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ, 23 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Post navigation

ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ  ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಆಯ್ಕೆ…
ನೆಲಜಿ ಇಗ್ಗುತ್ತಪ್ಪ ದೇವಸ್ಥಾನದ ಭಕ್ತ ಸಮಾರಾಧನಾ ಉತ್ಸವ…

Related Posts

ಮುದ್ದಂಡ ಕಪ್  ಹಾಕಿ ಸೆಮಿಸ್‌ಗಾಗಿ ನಾಳೆ ಬಲಿಷ್ಟ ಒಕ್ಕಗಳ ಕಾಳಗ

ಮುದ್ದಂಡ ಕಪ್ ಹಾಕಿ ಸೆಮಿಸ್‌ಗಾಗಿ ನಾಳೆ ಬಲಿಷ್ಟ ಒಕ್ಕಗಳ ಕಾಳಗ

24/04/202524/04/2025nadubadenews@gmail.com
ಮಡಿಕೇರಿ-ಸಂಪಾಜೆವರೆಗೆ, ತಡೆಗೋಡೆ ನಿರ್ಮಾಣಕ್ಕೆ 94ಕೋಟಿ ಕೇಂದ್ರದಿಂದ ಅನುಮೋದನೆ

ಮಡಿಕೇರಿ-ಸಂಪಾಜೆವರೆಗೆ, ತಡೆಗೋಡೆ ನಿರ್ಮಾಣಕ್ಕೆ 94ಕೋಟಿ ಕೇಂದ್ರದಿಂದ ಅನುಮೋದನೆ

16/03/202516/03/2025nadubadenews@gmail.com
ಏರ್‌ ರೈಫಲ್‌ ಶೂಟಿಂಗ್‌ಲ್‌ ಪೊನ್ನ್‌ ಗೆದ್ದ ಲೆ. ಅಜ್ಜಿನಂಡ ಐಶ್ವರ್ಯ ಮುಂದಾಳ್ತನತ ಕೂಟ್‌ಕಾರ

ಏರ್‌ ರೈಫಲ್‌ ಶೂಟಿಂಗ್‌ಲ್‌ ಪೊನ್ನ್‌ ಗೆದ್ದ ಲೆ. ಅಜ್ಜಿನಂಡ ಐಶ್ವರ್ಯ ಮುಂದಾಳ್ತನತ ಕೂಟ್‌ಕಾರ

22/04/202522/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version