ಮಡಿಕೇರಿ ಏ.28: ಪಿಂಚಣಿ ದಿನವು ಏಪ್ರಿಲ್, 29 ರಂದು (ನಾಳೆ) ಬೆಳಗ್ಗೆ 11 ಗಂಟೆಗೆ ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಸಂಪಾಜೆ ನಾಡ ಕಚೇರಿಯಲ್ಲಿ ನಡೆಯಲಿದೆ. ಈ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದುಕೊರತೆಗಳನ್ನು ನೊಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪ್ರವೀಣ್ ಪಿ.ಸಿ. ಅವರು ತಿಳಿಸಿದ್ದಾರೆ.