ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

ಮಡಿಕೇರಿ ಮೇ.14(Nadubade News): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.     ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಇದರಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ […]

Continue Reading

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

ಸೋಮವಾರಪೇಟೆ, ಮೇ.13(Nadubade News): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಕಂಪ್ಯೂಟರ್ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.        ವಿದ್ಯಾರ್ಹತೆ ಎಸಿಎ, ಬಿಇ ಇನ್ ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಬಸವನಹಳ್ಳಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ […]

Continue Reading

ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

ತಲಕಾವೇರಿ, ಮೇ.13(Nadubade News): ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮೇ, 14ರ ಬುಧವಾರದಂದು (ನಾಳೆ) ಮಧ್ಯಾಹ್ನ 2 ಗಂಟೆಯ ನಂತರ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ.  ಆದ್ದರಿಂದ ಸಾರ್ವಜನಿಕರು, ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Continue Reading

ಮೇ, 14 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

 ತಲಕಾವೇರಿ, ಮೇ.13(Nadubade News): ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮೇ, 14ರ ಬುಧವಾರದಂದು ಮಧ್ಯಾಹ್ನ 2 ಗಂಟೆಯ ನಂತರ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ.  ಆದ್ದರಿಂದ ಸಾರ್ವಜನಿಕರು, ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Continue Reading

ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

ಮಡಿಕೇರಿ ಮೇ 13(Nadubade News): ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‌ಆರ್‌ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳಮ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ […]

Continue Reading

ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  

 ಪೊನ್ನಂಪೇಟೆ,ಮೇ,12(Nadubade News): ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಅತ್ತೂರು ಕೊಲ್ಲಿ ಹಾಡಿ ಇತ್ತೀಚೆಗೆ ಅರಣ್ಯ ನಿವಾಸಿಗಳು ಹಾಗೂ ಅರಣ್ಯ ಇಲಾಖೆಯ ನಡುವೆ ಸೃಷ್ಟಿಯಾಗಿರುವ ವಿವಾದದ ಸ್ಥಳಕ್ಕೆ ವಿರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರು ಭೇಟಿ ನೀಡಿ ಪರಿಶೀಲಿಸಿದರು.       ಅರಣ್ಯ ವ್ಯಾಪ್ತಿ ನಿವಾಸಿಗಳು, ತಾವುಗಳು ಶತಮಾನಗಳಿಂದ ಇಲ್ಲಿ ವಾಸವಾಗಿದ್ದು ತಮಗೆ ಅರಣ್ಯ ರಕ್ಷಣೆ ಹಕ್ಕಿನಡಿ ಹಕ್ಕುಪತ್ರ ನೀಡಬೇಕೆಂದು ಬೇಡಿಕೆ ಇಟ್ಟರೆ, ಅರಣ್ಯಾಧಿಕಾರಿಗಳು ಸೂಕ್ತ […]

Continue Reading

ಶಾಸಕ ಪೊನ್ನಣ್ಣ ಪ್ರಾಯೋಜಿತ ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…

     ಮಡಿಕೇರಿ,ಮೇ,12(Nadubade News): ಸಿವಿಲ್ ಸರ್ವಿಸ್ ಪರೀಕ್ಷೆಗಳಾದ ಕೆ.ಪಿ.ಎಸ್.ಸಿ, ಯು.ಪಿ.ಎಸ್.ಸಿ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಿರುವ ತರಬೇತಿಯನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ  ಶಾಸಕರೂ ಆಗಿರುವ ಶ್ರೀ ಅಜ್ಜಿಕುಟ್ಟಿರ ಪೊನ್ನಣ್ಣ ಅವರು ಮುಂದಾಗಿದ್ದು, evidhya.com, ‘ನಮ್ಮ ಕೆ.ಪಿ.ಎಸ್.ಸಿ’ ಮೂಲಕ ಕೊಡಗಿನ ಅರ್ಹ 10 ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ದೊರಕಲಿದೆ. 2022 ಹಾಗೂ ನಂತರದಲ್ಲಿ ಪದವಿ ಶಿಕ್ಷಣ ಪೂರೈಸಿರುವವರು ಉಚಿತ ತರಬೇತಿ ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿದಾರರು https://evidhya.com/test/ ವೆಬ್ ಸೈಟ್‌ ನಲ್ಲಿ Aptitude ಆನ್‌ಲೈನ್ […]

Continue Reading

  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

 ಮಡಿಕೇರಿ, ಮೇ 12( Nadubade News): ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಪತ್ರಕತ೯ರ ಸಂಘ (ರಿ) ಇವರ ಸಹಯೋಗದಲ್ಲಿ ಮೇ 15 ರ ಗುರುವಾರ ಸಂಜೆ 5.30 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ಕೊಡಗಿನ ಪತ್ರಿಕಾರಂಗದ ಭೀಷ್ಮ, ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ  ದಿ.ಬಿ.ಎಸ್. ಗೋಪಾಲಕೃಷ್ಣ  ಅವರ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ.     ತ್ರಿಭಾಷಾ ಸಾಹಿತಿ ನಾಗೇಶ್ ಕಾಲೂರು ಅವರಿಗೆ ದತ್ತಿ ಪ್ರಶಸ್ತಿ  […]

Continue Reading

ಪೊನ್ನಂಪೇಟೆಯಲ್ಲಿ ಮೇ 17 ರಂದು ಬೃಹತ್ ರಕ್ತದಾನ ಶಿಬಿರ…

    ಪೊನ್ನಂಪೇಟೆ,ಮೇ.12(Nadubade News): ಕೊಡಗು ಬ್ಲಡ್ ಡೊನಾರ್ಸ್ (ರಿ) ಮಡಿಕೇರಿ  ,ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ( ರಿ) ಪೊನ್ನಂಪೇಟೆ.  ಇದರ ಜಂಟಿ ಆಶ್ರಯದಲ್ಲಿ ,ಜಿಲ್ಲಾ ರಕ್ತನಿಧಿ ಕೇಂದ್ರ ಮಡಿಕೇರಿ  ಇವರ ಸಹಕಾರದೊಂದಿಗೆ   ಮೇ 17 ರಂದು ಬೃಹತ್ ರಕ್ತದಾನ ಶಿಬಿರವನ್ನು   ಇಗ್ಗುತಪ್ಪ ಸೌಹಾರ್ದ ಬ್ಯಾಂಕ್  ಸಭಾಂಗಣ ಪೊನ್ನಂಪೇಟೆಯಲ್ಲಿ ಆಯೋಜಿಸಲಾಗಿದೆ.   ಸಾರ್ವಜನಿಕರು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ನಾಲ್ವರ ಜೀವ ಉಳಿಸಬಹುದಾಗಿದೆ, ಆದ್ದರಿಂದ  ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು […]

Continue Reading