ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…

    ಭಾಗಮಂಡಲ, ಮೇ.11 (Nadubade News): ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ ಸಂಪರ್ಕಿಸುವ ಮಡಿಕೇರಿ ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹ 4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು.    […]

Continue Reading

ಟ್ರಾನ್ಸ್‌ಫಾರ್ಮಿಂಗ್ ಟುಮಾರೋ ಫೌಂಡೇಶನ್  ಸಂಚಾರಿ ಮೊಬೈಲ್ ಘಟಕ ಲೋಕಾರ್ಪಣೆಗೊಳಿಸಿದ ಎಲ್. ಎ.ಸಿ. ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  

ವಿರಾಜಪೇಟೆ, ಮೇ.11(ನಡುಬಾಡೆ ನ್ಯೂಸ್):‌ ಟ್ರಾನ್ಸ್‌ಫಾರ್ಮಿಂಗ್ ಟುಮಾರೋ ಫೌಂಡೇಶನ್ (Transforming Tomorrow Foundation) ವತಿಯಿಂದ ಆರೋಗ್ಯ ಜಾತ್ರೆ ಎಂಬ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಕೊಡಗು ಜಿಲ್ಲಾದ್ಯಂತ ಹಮ್ಮಿಕೊಂಡಿದ್ದು, ಇದರ ಸಂಚಾರಿ ಮೊಬೈಲ್ ಘಟಕವನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟಿಸಿದರು.      ವಿರಾಜಪೇಟೆ ಶಾಸಕರ ಗೃಹ ಕಚೇರಿಯಲ್ಲಿ ಈ ಮೊಬೈಲ್ ಘಟಕವನ್ನು ಉದ್ಘಾಟಿಸಿ ಶುಭ ಕೋರಿದ ಮಾನ್ಯ ಶಾಸಕರು, ನಾಡಿನಾದ್ಯಂತ ಸಂಚರಿಸುವ ಈ ಮೊಬೈಲ್ ಘಟಕದ […]

Continue Reading

 ಮೇ 13 ರಿಂದ ತೆಕ್ ಮೊಗದ ದೇವಿ ಭದ್ರಕಾಳಿ ಬೋಡ್ ನಮ್ಮೆ…

ವಿರಾಜಪೇಟೆ: ಮೇ, 11(ನಡುಬಾಡೆ ನ್ಯೂಸ್)‌: ತೆಕ್ಕ್ ಮೊಗದ ಶ್ರೀ ಭದ್ರಕಾಳಿ ದೇವಿ ವಾರ್ಷಿಕ ಬೋಡ್ ನಮ್ಮೆ ಮತ್ತು ತೆರೆ ಮಹೋತ್ಸವ  ಮೇ ತಿಂಗಳ 13 ರಿಂದ ಆರಂಭವಾಗಿ 17 ರಂದು ಕೊನೆಯಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ವಿರಾಜಪೇಟೆ ತಾಲ್ಲೂಕಿನ ಬಿಳುಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಿಳುಗುಂದ,ಹೊಸಕೋಟೆ,ಮತ್ತು ನಲ್ವತೋಕ್ಲು ಗ್ರಾಮದ ಅಮ್ಮತ್ತಿ ನಾಡು ಬೋಂದಾ ಮುನ್ನೂರು ಒಕ್ಕಡ ದೇವಿಯಾಗಿರುವ ಶ್ರೀ ಭದ್ರಕಾಳಿ ದೇಗುಲದ ವಾರ್ಷಿಕ ತೆರೆ ಮತ್ತು ಬೋಡ್ ನಮ್ಮೆ ತಾ 13 ರಿಂದ […]

Continue Reading

ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….

ಪೊನ್ನಂಪೇಟೆ, ಮೇ.10 (ನಡುಬಾಡೆ ನ್ಯೂಸ್): ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ಸುಮಾರು ₹ 22 ಲಕ್ಷಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಲಾಯಿತು.    ‌     ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟನೆ ನೆರವೇರಿಸುತ್ತಾ ಮಾತನಾಡಿ, ತಾನು ಆಯ್ಕೆಯಾಗಿ ಬಂದಲ್ಲಿನಿಂದ ಕ್ಷೇತ್ರದಾದ್ಯಂತ ರಸ್ತೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆಯನ್ನು ನೀಡುತ್ತಿದ್ದು, ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು ಹಾಗೂ ವಿಶೇಷವಾಗಿ ಸಾರ್ವಜನಿಕರು ಇಂತಹ […]

Continue Reading

ಬಿಜಿಎಸ್ ಕಪ್  ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ…

    ಕುಶಾಲನಗರ ಮೇ,10(ನಡುಬಾಡೆ ನ್ಯೂಸ್): ಕೊಡಗು ಜಿಲ್ಲಾ ಒಕ್ಕಲಿಗ ಗೌಡ ಯುವ ವೇದಿಕೆ ವತಿಯಿಂದ ಕುಶಾಲನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ‘ಬಿಜಿಎಸ್ ಕಪ್’ ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಮೇ 13ರಿಂದ ಮೂರು ದಿನ ನಡೆಯಲಿದೆ. ‌    ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಕರ್ನಾಟಕ ರಾಜ್ಯ ಅಮೆಚೂರ್‌ಕಬಡ್ಡಿ ಅಸೋಸಿಯೇಷನ್ ಮತ್ತು ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕುಶಾಲನಗರ ಆಶ್ರಯದಲ್ಲಿ ಈ ಟೂರ್ನಿ […]

Continue Reading

ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…

     ವಿರಾಜಪೇಟೆ, ಮೇ.10(ನಡುಬಾಡೆ ನ್ಯೂಸ್): ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್(4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.‍ಎಸ್.‍ಎಲ್‍.ಸಿ. […]

Continue Reading

‌              ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ…

 ವಿರಾಜಪೇಟೆ,ಮೇ,10(ನಡುಬಾಡೆ ನ್ಯೂಸ್):  ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯು ಸೋಮವಾರದಿಂದ ಆರಂಭಗೊಂಡಿದೆ. ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗಿನ ಅವಧಿಯಲ್ಲಿ ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡುತ್ತಿದ್ದು, ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ಪ್ರಮುಖ ಮಾಹಿತಿಯನ್ನು ತಪ್ಪದೇ ನೀಡಬೇಕು.      ಮೊದಲನೇ ಹಂತದಲ್ಲಿ ಮೇ 05 ರಿಂದ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಮೇ 19 ರಿಂದ ಮೇ 21ರ ವರೆಗೆ […]

Continue Reading

ಅಮೃತ ಯುವ ಮೊಗೇರ ಕ್ರಿಕೆಟ್ ಪಂದ್ಯಾವಳಿ…

     ಮಡಿಕೇರಿ, ಮೇ,10(ನಡುಬಾಡೆ ನ್ಯೂಸ್):‌ ಅಮೃತ ಯುವ ಮೊಗೇರ ಸಿದ್ದಾಪುರ ಅಮ್ಮತಿ ಹೋಬಳಿ ಇವರ ವತಿಯಿಂದ ಮೂರನೇ ಬಾರಿಗೆ  ರಾಜ್ಯ ಮಟ್ಟದ ಮೊಗೇರ ಕ್ರಿಕೆಟ್ ಪಂದ್ಯವು ಮೇ 17 ಹಾಗೂ18 ರಂದು ಮಡಿಕೇರಿಯ ಮ್ಯಾನ್ಸ್  ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ , ಮೊಗೇರ ಬಾಂಧವರಿಗೆ ಮಾತ್ರ ಅವಕಾಶ ಇದ್ದು ಒಟ್ಟು  40 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಪಂದ್ಯದ ಶುಲ್ಕ 3,000 ನಿಗದಿ ಪಡಿಸಲಾಗಿದ್ದು ಕ್ರೀಡಾ ಕೂಟದ ವಿನ್ನರ್ಸ್ ತಂಡಕ್ಕೆ 33,333 ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ […]

Continue Reading

ವಿರಾಜಪೇಟೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಚಿಮ್ಮಂಗಡ ಕೆ. ಪೂವಣ್ಣ ಆಯ್ಕೆ…

ವಿರಾಜಪೇಟೆ, ಮೇ ,09(ನಡುಬಾಡೆ ನ್ಯೂಸ್):‌ ಇತ್ತೀಚಿಗೆ ನಡೆದ ವಿರಾಜಪೇಟೆ ವಕೀಲರ ಸಂಘದ ಚುನಾವಣೆಯಲ್ಲಿಸಂಘದ ನೂತನ   ಅಧ್ಯಕ್ಷರಾಗಿ ಚಿಮ್ಮಂಗಡ ಕೆ ಪೂವಣ್ಣ, ಉಪಾಧ್ಯಕ್ಷರಾಗಿ ಬಾಚಟ್ಟಿರ ಎನ್. ಸುಬ್ಬಯ್ಯ, ಕಾರ್ಯದರ್ಶಿಯಾಗಿ ಎನ್.ಎಸ್.ಪ್ರಶಾಂತ್, ಜಂಟಿ ಕಾರ್ಯದರ್ಶಿಯಾಗಿ  ಬಿ.ಎನ್. ಜಗದೀಶ್. ಖಜಾಂಚಿಯಾಗಿ  ಹಾಜಿರಾ ಷರೀಫ್ ಎಂ. ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಕೀತಿಯಂಡ ಪ್ರದ್ಯುಮ್ನ.  ಬಿ.ಅನುಪಮಾ ಕಿಶೋರ್.  ವಿಜಯಲಕ್ಷ್ಮಿ  ಸಿ.   ಪೊನ್ನಣ್ಣ ಸಿ. ಕೆ.   ಗೀತಾ ಬಿ.ಟಿ.  ವಿ.ಎಸ್. ಪ್ರೀತಮ್,  ಆಯ್ಕೆಯಾಗಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Continue Reading

ವಿರಾಜಪೇಟೆಯಲ್ಲಿ ಮೇ, 14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

 ಮಡಿಕೇರಿ ಮೇ.09(ನಡುಬಾಡೆ ನ್ಯೂಸ್): ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ  ಲೋಕಾಯುಕ್ತ ಅಧಿಕಾರಿಗಳು ಮೇ, 14 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ  ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು  ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.        […]

Continue Reading