https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

Author: nadubadenews@gmail.com

ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿ ತರಬೇತಿಗೆ ಅರ್ಜಿಆಹ್ವಾನ…

07/05/202507/05/2025nadubadenews@gmail.comLeave a Comment on ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿ ತರಬೇತಿಗೆ ಅರ್ಜಿಆಹ್ವಾನ…

ಪೊನ್ನಂಪೇಟೆ, ಮೇ.07(ನಡುಬಾಡೆ ನ್ಯೂಸ್):-‌ ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.      ಈ ಸಂಬಂಧ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ. 08274-200221 ಮತ್ತು 9036796935, 9880234243, 9945635160 […]

Continue Reading
ಮಡಿಕೇರಿ ಕೆಡಿಪಿ ಸಮಿತಿಗೆ  ನೇಮಕ…

ಮಡಿಕೇರಿ ಕೆಡಿಪಿ ಸಮಿತಿಗೆ ನೇಮಕ…

06/05/202506/05/2025nadubadenews@gmail.comLeave a Comment on ಮಡಿಕೇರಿ ಕೆಡಿಪಿ ಸಮಿತಿಗೆ ನೇಮಕ…

ಮಡಿಕೇರಿ, ಮೇ.06( ನಡುಬಾಡೆ ನ್ಯೂಸ್)‌: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡವರನ್ನು ಅಧಿಕಾರೇತರ ಸದಸ್ಯರುಗಳನ್ನಾಗಿ ನಾಮನಿರ್ದೇಶನಗೊಳಿಸಿದೆ. ಶ್ರೀ ಕನ್ನಿಕಂಡ ಶ್ಯಾಮ್ ಬಿನ್ ಸುಬ್ಬಯ್ಯ ಮಕ್ಕಂದೂರು ಗ್ರಾಮ. ಮಡಿಕೇರಿ ,ಶ್ರೀ ಕುಶಾಲಪ್ಪ ಕಲಿಯಂಡ ಕೊಳಕೇರಿ ನಾಪೋಕ್ಲ್‌, ಮಡಿಕೇರಿ, ಸಾಮಾನ್ಯ ಮಹಿಳೆ ಸ್ಥಾನಕ್ಕಾಗಿ ಶ್ರೀಮತಿ ತಿಲಕ್ ಸುಬ್ರಾಯ, ತಣ್ಣಿಮಾನಿ, ಭಾಗಮಂಡಲ,ಮಡಿಕೇರಿ, […]

Continue Reading

ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿಗೆ, ಸ್ಮಿತಾ ಅಮೃತರಾಜ್ ಅವರ  ಹಾಯ್ ಮೆಟಾಯ್ ಕಥಾ ಸಂಕಲನ ಆಯ್ಕೆ…

06/05/202506/05/2025nadubadenews@gmail.comLeave a Comment on ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿಗೆ, ಸ್ಮಿತಾ ಅಮೃತರಾಜ್ ಅವರ  ಹಾಯ್ ಮೆಟಾಯ್ ಕಥಾ ಸಂಕಲನ ಆಯ್ಕೆ…

ಮಡಿಕೇರಿ, ಮೇ.06(ನಡುಬಾಡೆ ನ್ಯೂಸ್):  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಮಹಿಳಾ ಸಾಹಿತಿಗಳಿಗೆ ಮೀಸಲಾಗಿ ಇಟ್ಟಿರುವ  ದತ್ತಿ “ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀಮತಿ  ಸ್ಮಿತಾ ಅಮೃತರಾಜ್ ಸಂಪಾಜೆಯವರು ರಚಿಸಿದ  ಕಥಾ ಸಂಕಲನ “ಹಾಯ್ ಮೆಟಾಯ್” ಕೃತಿಯು ಪುರಸ್ಕೃತ ಗೊಂಡಿದೆ.        ಜಿಲ್ಲೆಯ ಹಿರಿಯ ಸಾಹಿತಿಗಳಾದ ಶ್ರೀಮತಿ ವಿಜಯ ವಿಷ್ಣುಭಟ್ ರವರು‌ ಸ್ಥಾಪಿಸಿರುವ ಈ ದತ್ತಿಯ  ಮೊದಲ   ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ ಕೃತಿಗಳನ್ನು ಆಹ್ವಾನಿಸಿದಾಗ […]

Continue Reading

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ನೋಂದಣಿ ಅಭಿಯಾನ…

06/05/202506/05/2025nadubadenews@gmail.comLeave a Comment on ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ನೋಂದಣಿ ಅಭಿಯಾನ…

ಮಡಿಕೇರಿ ಮೇ.06(ನಡುಬಾಡೆ ನ್ಯೂಸ್ ):- ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರ ನೋಂದಣಿ ಅಭಿಯಾನ ನಡೆಯಲಿದೆ.      ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನದ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.  ಮೊದಲ […]

Continue Reading
ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…

ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…

06/05/202506/05/2025nadubadenews@gmail.comLeave a Comment on ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…

‌ ಶನಿವಾರಸಂತೆ ಮೇ,06(ನಡುಬಾಡೆ ನ್ಯೂಸ್): ಶನಿವಾರಸಂತೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಶನಿವಾರಸಂತೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು  ಕೈಗೊಳ್ಳಬೇಕಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1 ಹಂಡ್ಲಿ ಮಾರ್ಗದಲ್ಲಿ ಮೇ, 07 ಬುಧವಾರದಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.    ಆದ್ದರಿಂದ ಬೆಳ್ಳಾರಳ್ಳಿ, ಸಂಪಿಗೆದಾಳು, ಕಿತ್ತೂರು, ಮಣಗಲಿ, ಮೂದ್ರವಳ್ಳಿ, ದುಂಡಳ್ಳಿ, ಬಿಳಹ(ಬೆಂಬಳೂರು)  ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ […]

Continue Reading
ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯ, ಜನರೆಡೆಗೆ ಕನ್ನಡದ ಅಸ್ಮಿತೆಯನ್ನು ಪಸರಿಸಬೇಕಿದೆ :ಟಿ.ಜಿ.ಪ್ರೇಮಕುಮಾರ್…

ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯ, ಜನರೆಡೆಗೆ ಕನ್ನಡದ ಅಸ್ಮಿತೆಯನ್ನು ಪಸರಿಸಬೇಕಿದೆ :ಟಿ.ಜಿ.ಪ್ರೇಮಕುಮಾರ್…

06/05/202506/05/2025nadubadenews@gmail.comLeave a Comment on ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯ, ಜನರೆಡೆಗೆ ಕನ್ನಡದ ಅಸ್ಮಿತೆಯನ್ನು ಪಸರಿಸಬೇಕಿದೆ :ಟಿ.ಜಿ.ಪ್ರೇಮಕುಮಾರ್…

‌    ಮಡಿಕೇರಿ, ಮೇ 6 (ನಡುಬಾಡೆ ನ್ಯೂಸ್, ಟಿ.ಜಿ. ಪ್ರೇಮ್‌ಕುಮಾರ್):‌ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ( ಕಸಾಪ ) ವತಿಯಿಂದ ಮಡಿಕೇರಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ  ಸಂಸ್ಥಾಪನಾ ದಿನವನ್ನು  ಆಚರಿಸಲಾಯಿತು.      ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ “ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ […]

Continue Reading

ಪ್ರೌಢಶಾಲಾ ಸಹ ಶಿಕ್ಷಕರ  ತಾತ್ಕಾಲಿಕ ಜೇಷ್ಠತಾಪಟ್ಟಿ ಪ್ರಕಟ,  ಆಕ್ಷೇಪಣೆ ಸಲ್ಲಿಸಲು ಮೇ08ರೊಳಗೆ ಅವಕಾಶ…

05/05/202505/05/2025nadubadenews@gmail.comLeave a Comment on ಪ್ರೌಢಶಾಲಾ ಸಹ ಶಿಕ್ಷಕರ  ತಾತ್ಕಾಲಿಕ ಜೇಷ್ಠತಾಪಟ್ಟಿ ಪ್ರಕಟ,  ಆಕ್ಷೇಪಣೆ ಸಲ್ಲಿಸಲು ಮೇ08ರೊಳಗೆ ಅವಕಾಶ…

ಮಡಿಕೇರಿ ಮೇ.05(ನಡುಬಾಡೆ ನ್ಯೂಸ್):-  ಮಡಿಕೇರಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ  ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಪ್ರೌಢ ಶಾಲಾ ಸಹ ಶಿಕ್ಷಕರು ಗ್ರೇಡ್-2 ರವರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು  ಆಯುಕ್ತರ ಕಚೇರಿ ಬೆಂಗಳೂರು ಕಚೇರಿ ಅಧಿಸೂಚನೆ ಸಂಖ್ಯೆ:ಸಿ4(2) ಪ್ರೌ ಶಾ.ಶಿ ಉ ಬಡ್ತಿ 02/202-21 ದಿ :25/04/2025 ಮತ್ತು ಮಾನ್ಯ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಇವರ […]

Continue Reading

 ಮೇ 07ರಂದು  ಸುಂಟಿಕೊಪ್ಪದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ…

05/05/202505/05/2025nadubadenews@gmail.comLeave a Comment on  ಮೇ 07ರಂದು  ಸುಂಟಿಕೊಪ್ಪದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ…

     ಸುಂಟಿಕೊಪ್ಪ,ಮೇ,05(ನಡುಬಾಡೆ ನ್ಯೂಸ್):‌ ಸುಂಟಿಕೊಪ್ಪ ಬ್ಲೂ ಬಾಯ್ಸ್ ಯೂತ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿರುವ ಡಿ. ಶಿವಪ್ಪ ಮೆಮೋರಿಯಲ್ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯ ಪ್ರಯುಕ್ತ ದಿನಾಂಕ 07-05-2025 ರಂದು ಪೂರ್ವಹ್ನ 10 ಗಂಟೆಯಿಂದ 3 ಗಂಟೆಯವರೆಗೆ ನಾರಾಯಣ ಆಸ್ಪತ್ರೆಯವರ ಸಹಯೋಗದಲ್ಲಿ ಸುಂಟಿಕೊಪ್ಪ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಉಚಿತ ಹೃದ್ರೋಗ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಬ್ಲೂ ಬಾಯ್ಸ್ ಯೂತ್ ಕ್ಲಬ್‌ನ ಅಧ್ಯಕ್ಷರಾದ ಕೆ.ಎಂ. ಆಲಿಕುಟ್ಟಿ ಮತ್ತು […]

Continue Reading

ನಾಳೆ ಮಡಿಕೇರಿ ಮತ್ತು ಕೊಡ್ಲಿಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

05/05/202505/05/2025nadubadenews@gmail.comLeave a Comment on ನಾಳೆ ಮಡಿಕೇರಿ ಮತ್ತು ಕೊಡ್ಲಿಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

ಮಡಿಕೇರಿ, ಮೇ.05(ನಡುಬಾಡೆ ನ್ಯೂಸ್):- ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು  ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ ಮಾರ್ಗದಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.      ಆದ್ದರಿಂದ ಅವರದಾಳು, ಕಣ್ಣಾರಳ್ಳಿ, ಕೊಡ್ಲಿಪೇಟೆ, ಬ್ಯಾಡಗೊಟ್ಟ, ನೀರುಗುಂದ, ಹೆಮ್ಮನೆ, ಬೆಸ್ಸೂರು, ಕಟ್ಟೆಪುರ, ನಿಲುವಾಗಿಲು, ಕೂಡ್ಲೂರು, ದೊಡ್ಡಬಂಡಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.      […]

Continue Reading

ಸೇನಾ ನೇಮಕಾತಿ ಅರಿವು ಕಾರ್ಯಾಗಾರ ಮೇ 10ರಂದು ತಾಳತ್ತಮನೆಯಲ್ಲಿ …

05/05/202505/05/2025nadubadenews@gmail.comLeave a Comment on ಸೇನಾ ನೇಮಕಾತಿ ಅರಿವು ಕಾರ್ಯಾಗಾರ ಮೇ 10ರಂದು ತಾಳತ್ತಮನೆಯಲ್ಲಿ …

    ಮಡಿಕೇರಿ ಮೇ 5(ನಡುಬಾಡೆ ನ್ಯೂಸ್):‌  ತಾಳತ್ತಮನೆಯ ನೇತಾಜಿ ಯುವಕ ಮಂಡಲ ಹಾಗೂ ಹೊಟೇಲ್ ಆಕ್ಸಿರಿಚ್ ಸಂಯಕ್ತಾಶ್ರಯದಲ್ಲಿ ಮೇ 10 ರಂದು ತಾಳತ್ತಮನೆಯಲ್ಲಿ ಸೇನಾ ನೇಮಕಾತಿಯ ಬಗ್ಗೆ ಅರಿವು ಕಾರ್ಯಾಗಾರ ನಡೆಯಲಿದೆ. ಅಂದು ಅಪರಾಹ್ನ 2.30 ಗಂಟೆಗೆ ತಾಳತ್ತಮನೆಯ ಹೊಟೇಲ್ ಆಕ್ಸಿರಿಚ್ ಸಭಾಂಗಣದಲ್ಲಿ ಭಾರತೀಯ ಸೇನೆಗೆ ನೇಮಕಾತಿ ಬಯಸುವ ಆಕಾಂಕ್ಷಿತ 15 ರಿಂದ 25 ವರ್ಷದ ಯುವಕ ಮತ್ತು ಯುವತಿಯರಿಗೆ ಕಾರ್ಯಾಗಾರ ನಡೆಯಲಿದ್ದು, ಸೇನೆಯಲ್ಲಿ ಸೇನಾಧಿಕಾರಿ ಮತ್ತು ಅಗ್ನಿವೀರ್ ಹುದ್ದೆಗಳಿಗೆ ಆಯ್ಕೆಯಾಗಲು ಬೇಕಾದ ಉಪಯುಕ್ತ ಮಾಹಿತಿಗಳನ್ನು ನೀಡಲಾಗುವುದು. […]

Continue Reading

Posts navigation

Older posts
Newer posts
nadubadenews | Theme: News Portal by Mystery Themes.
error: Content is protected !!
WhatsApp us
Go to mobile version