ಮುದ್ದಂಡ ಕಪ್ ಹಾಕಿ ನಮ್ಮೆ: ಇದೇ ಪ್ರಥಮ ಬಾರಿಗೆ ವಿಡಿಯೋ ರೆಫರಲ್ ಪರಿಚಯ,  ಏ.27ರ ಸಮಾರೋಪಕ್ಕೆ ಸಚಿವರ ಶಾಸಕರ ದಂಡು…

ಮಡಿಕೇರಿ ಏ.21 : ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ನಡೆಯುತ್ತಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದ್ದು, ಬೃಹತ್ ಪರದೆಗಳನ್ನು ಅಳವಡಿಸಲಾಗುವುದು ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುದ್ದಂಡ ಹಾಕಿ ಉತ್ಸವದ ಕ್ರೀಡಾ ಪ್ರವರ್ತಕ ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಹಾಗೂ ಲೈವ್ ಸ್ಟ್ರೀಮಿಂಗ್ ಮತ್ತು ರೆಫರಲ್ ಸಲಹೆಗಾರ ಐಚೆಟ್ಟಿರ ತನೀಶ್ […]

Continue Reading

ಮುದ್ದಂಡ ಕಪ್‌ ಮಹಿಳಾ ಹಾಕಿ :  ಹಲವು ಒಕ್ಕಗಳು ಮುಂದಿನ ಸುತ್ತಿಗೆ…

ಮಡಿಕೇರಿ, ಏ.21:- ಕೊಡವ ಕೌಟುಂಬಿಕ ಬೆಳ್ಳಿ ಹಬ್ಬದ ಹಾಕಿ ನಮ್ಮೆಯಲ್ಲಿ, ಇಂದಿನಿಂದ ಪ್ರಾರಂಭವಾದ ಮಹಿಳಾ ಪೈಪೋಟಿಯಲ್ಲಿ,  ತಾತಂಡ ಮತ್ತು ಪಾಂಡಿರ (ಹೆಬ್ಬೆಟ್ಟಗೇರಿ) ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪಾಂಡಿರ ತಂಡ ಗೆಲುವು ಸಾಧಿಸಿತು. ಪಾಂಡಿರ ಪರ ಕವಿತಾ ಮಂಜು ಹ್ಯಾಟ್ರಿಕ್ ಗೋಲು ದಾಖಲಿಸಿ, ಗಮನ ಸೆಳೆದರು. ತಾತಂಡ ಅನೂರ ಸೋಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ಜಯ ಸಾಧಿಸಿತು. ಕಾಂಡಂಡ […]

Continue Reading

ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

ಮಡಿಕೇರಿ ಏ.21– ಮಡಿಕೇರಿ ನಗರದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ಏಪ್ರಿಲ್, 25 ರಂದು ಜರುಗುವ “ವಾರ್ಷಿಕೋತ್ಸವ” ಪೂಜೆ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏಪ್ರಿಲ್, 25 ರಂದು ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ಗಣಪತಿ ಹೋಮ ಮತ್ತು ಕಲಶಾಭಿಷೇಕ ಪೂಜೆಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ […]

Continue Reading

ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

        ಮಡಿಕೇರಿ ಏ.21:-  ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.        ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.

Continue Reading

ನಮ್ಮ ಸುತ್ತಮುತ್ತ ಪರಿಸರ ಶುಚಿತ್ವ ನಮ್ಮ ಹೊಣೆಯಾಗಲಿ: ಜಿಲ್ಲಾಧಿಕಾರಿ

ಮಡಿಕೇರಿ, ಏ.21: ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಸುತ್ತಮುತ್ತ ತೆಂಗಿನ ಚಿಪ್ಪು, ಟೈರು, ಹೂಕುಂದಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಪರಿಸರ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.   ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ‘ಜಿಲ್ಲಾ ಆರೋಗ್ಯ ಅಭಿಯಾನ’ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯ ಸುತ್ತಮುತ್ತ ಪರಿಸರ ಶುಚಿತ್ವವಾಗಿದ್ದಲ್ಲಿ ಉತ್ತಮ ಆರೋಗ್ಯ […]

Continue Reading

ಮುದ್ದಂಡ ಕಪ್ ಹಾಕಿ ಉತ್ಸವ : ಏ.21 ರಂದು ನಡೆದ ಪಂದ್ಯಾವಳಿ ವಿಜೇತರು

ಮಡಿಕೇರಿ ಏ.21 : ನಾಳಿಯಂಡ ಮತ್ತು ಕೊಂಗೇಟಿರ ತಂಡಗಳ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ನಿಗಧಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಟೈ ಬ್ರೇಕರ್ ನಲ್ಲಿ 4-3 ಗೋಲುಗಳ ಅಂತರದಲ್ಲಿ ನಾಳಿಯಂಡ ತಂಡ ಗೆಲುವು ಸಾಧಿಸಿತು. ಕೊಂಗೇಟಿರ ರೋಹನ್ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋಟೇರ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ತಂಡ ಜಯ ಸಾಧಿಸಿತು. ಪುದಿಯೊಕ್ಕಡ ಪರ ಪ್ರಧಾನ್ ಸೋಮಣ್ಣ ಹಾಗೂ ಮಿಥನ್ ಪೊನ್ನಪ್ಪ […]

Continue Reading

ಮುದ್ದಂಡ ಕಪ್ : ಚಾಲನೆಗೊಂಡ ಮಹಿಳಾ ಹಾಕಿ…

ಮಡಿಕೇರಿ ಏ.21 : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯ ಪೈಪೋಟಿ ಆರಂಭಗೊಂಡಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಮಹಿಳೆಯರ 5ಎ ಸೈಡ್ ಹಾಕಿ ಪಂದ್ಯಾವಳಿಗೆ ಅರ್ಜುನ ಪ್ರಶಸ್ತಿ ವಿಜೇತ, ಮಾಜಿ ಒಲಂಪಿಯನ್ ಎಂ.ಎಂ.ಸೋಮಯ್ಯ ಅವರು ಚಾಲನೆ ನೀಡಿದರು.      ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‌ಬಾಲ್ […]

Continue Reading

ಐದು ಲಕ್ಷ ವಲಸೆ ಕಾರ್ಮಿಕರಲ್ಲಿ  ಕೇವಲ 46000 ಮಾತ್ರ ನೋಂದಣಿ : ತಲೆ ಕೆಡಿಸಿ ಕೊಂಡ ಇಲಾಖೆ…

ಬೆಂಗಳೂರು, ಏ.21:  ರಾಜ್ಯದಲ್ಲಿ ಐದು ಲಕ್ಷಕ್ಕೂ ಅಧಿಕ ವಲಸಿಗ ಕಾರ್ಮಿಕರಿದ್ದಾರೆ. ಆದರೆ, ಇದುವರೆಗೆ ನೋಂದಣಿಯಾಗಿದ್ದು ಕೇವಲ 46 ಸಾವಿರ ಕಾರ್ಮಿಕರು ಮಾತ್ರ. ಈ ನಡುವೆ ರಾಜ್ಯದಲ್ಲಿ ವಲಸಿಗ ಕಾರ್ಮಿಕರಿಂದ ಕ್ರೈಂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವ ವಲಸಿಗರ ಪತ್ತೆ ಕಾರ್ಯ ಪೊಲೀಸ್ ಇಲಾಖೆಗೆ ಕಷ್ಟಕರವಾಗಿದೆ. ಅಪರಾಧಿಗಳನ್ನು ಪತ್ತೆ ಹಚ್ಚುವುದು ತಲೆನೋವಾಗಿ ಪರಿಣಮಿಸಿದೆ.           ಕೆಲ ದಿನಗಳ ಹಿಂದೆ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ  ಮಾಡಿದ್ದ ಆರೋಪಿ ರಿತೇಶ್​ ಕುಮಾರ್​​ ಹುಬ್ಬಳ್ಳಿ ಪೊಲೀಸರ   ಗುಂಡಿಗೆ […]

Continue Reading

23ರಂದು ಕೊಡಗು ವಿಶ್ವವಿದ್ಯಾಲಯ ಸಾಧಕಬಾಧಕಗಳ ಕುರಿತು ಸಂವಾದ…  

ಮಡಿಕೇರಿ ಏ.21:  ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಈ ತಿಂಗಳ 23ರ ಬುಧವಾರದಂದು ಕೊಡಗು ವಿಶ್ವವಿದ್ಯಾಲಯಕ್ಕೆ ಸಂಬಂದಿಸಿದ ಸಾಧಕ ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.        ಮಡಿಕೇರಿ ಪತ್ರಿಕಾ ಭವನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳು ಮಾಜಿ ಶಾಸಕರುಗಳು ರಾಜಕೀಯ ಪಕ್ಷಗಳ ಪ್ರಮುಖರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶಿಕ್ಷಣ ತಜ್ಞರು ಸಂವಾದದಲ್ಲಿ ಪಾಲ್ಗೊಳ್ಳುವರು . ಕೊಡಗು ವಿಶ್ವವಿದ್ಯಾಲಯಕ್ಕೆ ಸಂಬಂದಿಸಿದ ಸಮಸ್ಯೆಗಳನ್ನು , ಗೊಂದಲಗಳನ್ನು ನೇರವಾಗಿ ಕೇಳಿ , ಚರ್ಚಿಸಿ […]

Continue Reading

ಕೊಡಗು ಹೆಗ್ಗಡೆ ಸಮಾಜದ ನೂತನ ಅಧ್ಯಕ್ಷರಾಗಿ ಕೊರಕುಟ್ಟಿರ ಸರಾಚಂಗಪ್ಪ ಅಯ್ಕೆ…

     ವಿರಾಜಪೇಟೆ,ಏ.21: 2025-30ರ ಆವಧಿಗೆ ಕೊಡಗು ಹೆಗ್ಗಡೆ ಸಮಾಜದ ನೂತನ ಅಧ್ಯಕ್ಷರಾಗಿ ಕೊರಕುಟ್ಟಿರ ಸರಾ ಚಂಗಪ್ಪ, ಉಪಾಧ್ಯಕ್ಷರಾಗಿ ಚರ್ಮಂಡ ಅಪ್ಪುಣು ಪೂವಯ್ಯ,  ಗೌರವ ಕಾರ್ಯದರ್ಶಿಯಾಗಿ ಪಡಿಞಾರಂಡ ಪ್ರಭು ಕುಮಾರ್, ಕೋಶಾಧ್ಯಕ್ಷರಾಗಿ  ಕೊರಂಡ ಪ್ರಕಾಶ್ ನಾಣಯ್ಯನವರನ್ನು ಅವಿರೋಧವಾಗಿ ಅಯ್ಕೆ ಮಾಡಿದರು ನಿರ್ದೆಶಕರುಗಳಾಗಿ ಕೊಂಗೇಪಂಡ ರವಿ, ಕೊಪ್ಪಡ ಪಟ್ಟು ಪಳಂಗಪ್ಪ, ಪಾನಿಕುಟ್ಟಿರ ಕುಟ್ಟಪ್ಪ, ತಂಬಂಡ ಮಂಜುನಾಥ್, ಕೊಕ್ಕೇರ ಜಗನಾಥ್, ತೊರೇರ ರಾಜ ಪೂವಯ್ಯ, ಪಂದಿಕಂಡ ಕುಶದಿನೇಶ್, ಚಳಿಯಂಡ ಕಮಲಾ ಉತ್ತಯ್ಯ, ಮೂರೀರ ಶಾಂತಿ, ಪೊಟ್ಟಂಡ ವಸಂತಿ ಗಣೇಶ್ ಆಯ್ಕೆಯಾದರು. ಕೊಡಗು […]

Continue Reading