ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ
ಮಡಿಕೇರಿ,ಮಾ.06:- ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆಯ ಅಧಿಕಾರಿಗಳು ಮಾರ್ಚ್, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. […]
Continue Reading