Category: News, Informatin , Enteetinement and Advertisement
News, Informatin , Enteetinement and Advertisement
ತರಕಾರಿ ಗೋಡೌನ್ ಆಗಿರುವ ಶನಿವಾರಸಂತೆ ಬಸ್ಸ್ಟಾಪ್
ಶನಿವಾರಸಂತೆ, ಮೇ.31: ಇಲ್ಲಿನ ಗ್ರಾಮಪಂಚಾಯಿತಿ ಮುಂಬಾಗದಲ್ಲಿ ಇರುವ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿನ ತರಕಾರಿ ಅಂಗಡಿಯವರು ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ಆಕ್ರಮಿಸಿಕೊಂಡು ಗೋಡೌನ್ ರೀತಿಯಲ್ಲಿ ಬಳಸುತಿದ್ದು, ಗಾಳಿ ಮಳೆಗೆ ಪ್ರಯಾಣಿಕರು, ವಿದ್ಯಾರ್ಥಿಗಳು ತಂಗುದಾಣದೊಳಗೆ ನಿಲ್ಲಲಾಗದೆ ತೀವ್ರ ಕಷ್ಟ ಅನುಭವಿಸುತಿದ್ದಾರೆ. ಸಂಬಂದಿಸಿದ ಗ್ರಾಮ ಪಂಚಾಯತಿ ಕಂಡು ಕಾಣದಂತಿರುವುದು ಸಾರ್ವಜನಿಕ ಅಸಮಾಧಾನಕ್ಕೆ ಕಾರಣವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Continue Readingಕಡಂಗದಲ್ಲಿ ಟ್ರಾಫಿಕ್ ಕಿರಿ ಕಿರಿ, ಬೋರ್ಡಿಗಿಲ್ಲ ಕಿಮ್ಮತ್ತು..
ಚೆಯ್ಯಂಡಾಣೆ, ಮೇ.31: (nadubadenews) : (ವರದಿ: ಅಶ್ರಫ್) ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಕಡಂಗ ಪಟ್ಟಣದಲ್ಲಿ ಸೂಕ್ತ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಿದರೂ ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುವುದರಿಂದ ಟ್ರಾಫಿಕ್ ಕಿರಿಕಿರಿ ನಿತ್ಯ ನಿರಂತರವಾಗಿದೆ. ಪಟ್ಟಣದಲ್ಲಿ ಸರಕಾರಿ ಪ್ರಾಥಮಿಕ ಶಾಲೆ, ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಸರಕಾರಿ ಆಯುಷ್ ಆಸ್ಪತ್ರೆ, ಕೆನರಾಬ್ಯಾಂಕ್, ಕೆಡಿಸಿಸಿ ಬ್ಯಾಂಕ್, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಬ್ಯಾಂಕ್, ನ್ಯಾಯಬೆಲೆ ಅಂಗಡಿ, ಅಂಚೆ ಕಚೇರಿ, 2 ಅಂಗನವಾಡಿ ಕೇಂದ್ರ, 2 ಜುಮಾ ಮಸೀದಿ, 2 ಮದರಸ, […]
Continue Readingಅಣಬೆ ಬೇಸಾಯ ಉಚಿತ ತರಬೇತಿಗೆ ಅರ್ಜಿ ಆಹ್ವಾನ…
ಮಡಿಕೇರಿ ಮೇ.30(Nadubade News): ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಜೂನ್ 17 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು […]
Continue Readingಕೊಡಗಿನಲ್ಲಿ ಮೀನು ಹಿಡಿಯುವ ಹಾಗಿಲ್ಲ…
ಮಡಿಕೇರಿ ಮೇ.30(Nadubade News): ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಕಣಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ. ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು […]
Continue Readingಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಅಧಿಕಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ನಿರ್ದೇಶನ…
ಮಡಿಕೇರಿ , ಮೇ.30 ( Nadubade News): ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದು ಅವರು ಮಾತನಾಡಿದರು. ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆ ಮತ್ತು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕುಟುಂಬಗಳ ಸ್ಥಳಾಂತರ ಜೊತೆಗೆ […]
Continue Readingಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್ಲ್ ನಾಳ್…
ನಾಡ್ಲ್ ನಾಳ್– 25 ಕೈಂಜ ವಾರತಿಂಜ… ಚೇಲಂಗ ಚೆನ್ನಂಗಾಳ್ ಪಟ್ಟೆದಾರಂಡ ಪರ ನಿಂದಿತ್, ಇಕ್ಕ ಮನೆಲ್ ಮೋರ್ಕುತ್ತಿ ತೇಡಂಡೂಂದ್ ಎಣ್ಣ್ಚಿ. ಎಲ್ಲಾರೂ ಕುತೂಹಲತ್ ನೋಟಿಯಂಡ್ ನಿಂದತ್. ಪಟ್ಟೆದಾರ ಒರ್ ಗತ್ತ್ರ ತೆಳಿಗೊಂಡ್ ಬಾಡೆಕ್ ನಡ್ಂದತ್. ನೇಲೆಕ್ ಬೆಚ್ಚ ತಿರಿ ಬೊಳ್ಚತ್ರ ಅಡಿಲ್ ಮೋರ್ಕುತ್ತಿ ಪಳುವಯಿಂಜತ್. ”ಹ್ಂ, ಪೋಯಿರಾ ಆ ಮೋರ್ಕುತ್ತಿನ ಚೌಟಿತ್ ಒಡೆರಿ.” ಪಟ್ಟೆದಾರ ಅಪ್ಪಣೆ ಕೊಡ್ತತ್. ಇಕ್ಕ ಇಂಞೊಮ್ಮ ಚಿಮ್ಮಂಡ ಮೇಲ್ ಪುಳಿಕೆಟ್ಟ್ಚಿ. ಅಣ್ಣು ಕ್ಣ್ಣ ಓಡಿ ಪೋಯಿತ್ ಮೋರ್ಕುತ್ತಿಕ್ ಒರ್ ಚೌಟ್ ಚೌಟ್ಚಿ. ಅಣ್ಣು […]
Continue Readingಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ…
ಮಡಿಕೇರಿ ಮೇ.29(Nadubade News): ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ Food Craft Institute (FCI), Mysore ಹಾಗೂ Institute of Hotel Management (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಸರ್ಕಾರವು ಅನುಮೋದನೆ ನೀಡಿದೆ. ಕೊಡಗು ಜಿಲ್ಲೆಯ ಪರಿಶಿಷ್ಟ […]
Continue Readingಪೇರಿಯಂಡ ಪೆಮ್ಮಯ್ಯ ದೇವಕ್ಕಿ ಹೆಸರಿನ ದತ್ತಿ ನಿಧಿ ಸ್ಥಾಪನೆ
ಮಡಿಕೇರಿ, ಮೇ.29: (nadubadenews): ಕೊಡಗು ಜಿಲ್ಲೆಯ ವಕೀಲರಾದ ಪೇರಿಯಂಡ ಪಿ ಪೆಮ್ಮಯ್ಯ ಮತ್ತು ಶ್ರೀಮತಿ ಜಿ.ಕೆ ದೇವಕಿ ಪೆಮ್ಮಯ್ಯ ರವರು ಕೊಡಗಿನ ಲೇಖಕರಿಗಾಗಿ ದತ್ತಿ ಪ್ರಶಸ್ತಿ ಸ್ಥಾಪಿಸಿರುತ್ತಾರೆ. ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಸೀಮಿತವಾಗಿರುವ ಈ ಪ್ರಶಸ್ತಿಗಾಗಿ ಇವರು ಒಂದು ಲಕ್ಷ ರೂಗಳ ದತ್ತಿಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮುಖಾಂತರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಠೇವಣಿ ಇಡುವ ಮೂಲಕ ಸ್ಥಾಪಿಸಿದ್ದಾರೆ. ಕೊಡಗು ಜಿಲ್ಲೆಯ ಲೇಖಕರು ಪ್ರಕಟಿಸಿರುವ ಕಥೆ, ಕಾದಂಬರಿ, ಕಥಾ ಸಂಕಲನ, ಕವನ ಸಂಕಲನ, […]
Continue Reading