
ಬೆಂಗಳೂರು, ಜೂ.18: (nadubadenews): ವಸಂತನಗರದ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ನೇತೃತ್ವದಲ್ಲಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತರ ಮುಖಂಡರೊಂದಿಗೆ ಸಭೆ ನಡೆಸಲಾಯಿತು.
ಶಾಸಕರ ನೇತೃತ್ವದ ನಿಯೋಗದ ಮನವಿ ಆಲಿಸಿದ ಸಚಿವರು ವಿರಾಜ ಪೇಟೆ ಕ್ಷೇತ್ರದ ವ್ಯಾಪ್ತಿಯ ಮಸೀದಿ, ಖಬರಸ್ಥಾನ, ಶಾದಿ ಮಹಲ್, ಚರ್ಚ್ ಹಾಗೂ ಅಲ್ಪಸಂಖ್ಯಾತರ ಆರ್ಥಿಕ, ಶೈಕ್ಷಣಿಕ, ಮೂಲ ಸೌಲಭ್ಯಗಳ ಅಭಿವೃದ್ದಿ ಕಾಮಗಾರಿಗಳಿಗೆ ಕೂಡಲೇ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು